ಮಂಡ್ಯ

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ

ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ ಹಾಗೂ ದಾಖಲೆ ತಿದ್ದಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯೇ ನೇರ ಹೊಣೆಗಾರರಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಕಿಂಗ್‌ಪಿನ್‌ಗಳು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಆದ್ದರಿಂದ ಹಾಲಿ ನ್ಯಾಯಾಽಶರು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಶಾಸಕ ಸುರೇಶ್‌ಗೌಡ ಒತ್ತಾಯಿಸಿದರು.

ಸಚಿವ ಎನ್.ಚಲುವರಾಯಸ್ವಾಮಿ ಅವರ ಅನುಮತಿ ಇಲ್ಲದೆ ಒಂದು ಹುಲ್ಲು ಕಡ್ಡಿಯೂ ಅಲುಗಾಡುವುದಿಲ್ಲ. ಅದರಂತೆ ಈ ಪ್ರಕರಣದಲ್ಲೂ ಅವರೇ ನೇರ ಹೊಣೆಗಾರರಾಗಿದ್ದಾರೆ. ಭೂಗಳ್ಳತನದ ಬಗ್ಗೆ ನಾನು ಈ ಹಿಂದೆಯೂ ಧ್ವನಿ ಎತ್ತಿದ್ದೆ. ಆದರೆ, ಇದೀಗ ಲೋಕಾಯುಕ್ತ ದಾಳಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನನ್ನ ತಪ್ಪಿದ್ದರೂ ಕ್ರಮ ಕೈಗೊಳ್ಳಲಿ
ಪ್ರಕರಣದಲ್ಲಿ ನಿಜವಾದ ಕಿಂಗ್‌ಪಿನ್‌ಗಳು ಯಾರೂ ಸಿಕ್ಕಿಲ್ಲ. ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಸುತ್ತಿರುವುದು ಹೊಸದಲ್ಲ. 1990 ರಿಂದಲೂ ನಿರಂತರವಾಗಿ ನಡೆಯುತ್ತಿದೆ. ನಾಗಮಂಗಲ ಕ್ಷೇತ್ರದಲ್ಲಿ 4500ಕ್ಕೂ ಹೆಚ್ಚು ಹೆಕ್ಟೇರ್ ಸರ್ಕಾರಿ ಜಮೀನು ಇದೆ. ಆದ್ದರಿಂದ ಈ ಪ್ರಕರಣ ಸಂಪೂರ್ಣವಾಗಿ ತನಿಖೆ ಆಗಬೇಕು. ನನ್ನ ಅವಽಯಲ್ಲಿ ಅಕ್ರಮ ಆಗಿದ್ದರೂ ತನಿಖೆ ನಡೆಸಬೇಕು. ನನ್ನ ತಪ್ಪಿದ್ದರೂ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.

ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗಲ್ಲ:
ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲಾಗುತ್ತಿದೆ. ಆದರೆ, ಕಂದಾಯ ಹಾಗೂ ಪೊಲೀಸ್ ಇಲಾಖೆಗೂ ಯಾವುದೇ ಸಂಬಂಧವಿಲ್ಲ. ಪೊಲೀಸ್ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸ ಇಲ್ಲ. ಅತ್ತ ಲೋಕಾಯುಕ್ತ ಅಧಿಕಾರಿಗಳು ತುಂಬಾ ಆಳಕ್ಕೆ ಹೋಗಿ ತನಿಖೆ ಮಾಡಿದರೂ ಭೂಗಳ್ಳರು ಸಿಗಲ್ಲ. ಆದ್ದರಿಂದ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ನಕಲಿ ದಾಖಲೆ ಸೃಷ್ಟಿ, ಕಡತ ತಿದ್ದುಪಡಿ ಸೇರಿದಂತೆ ಹಲವಾರು ಅಕ್ರಮವಾಗಿದೆ. ವರ್ಗಾವಣೆಯಾಗಿರುವ ಅಧಿಕಾರಿಗಳನ್ನು ಇಟ್ಟುಕೊಂಡು ಈ ಕೆಲಸ ಮಾಡಲಾಗುತ್ತಿದೆ. ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿದರೆ ಮಾತ್ರ ಪ್ರಕರಣಕ್ಕೆ ನ್ಯಾಯ ಸಿಗಲಿದೆ. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹೋಗುವ ಸಾಧ್ಯತೆ ಇದೆ. ಕಾರಣ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ಷೇತ್ರದಲ್ಲಿ ಒಂದು ಕಡ್ಡಿ ಅಲ್ಲಾಡುತ್ತಿಲ್ಲ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಜಾ.ದಳ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಚನ್ನಪ್ಪ, ಸಂತೋಷ್, ಅಪ್ಪಾಜಿ, ನಾಗೇಶ್, ರಾಜೇಗೌಡ, ಶ್ರೀನಿವಾಸ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

42 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago