ಮಂಡ್ಯ

ಭಾರಿ ಗಾತ್ರದ ಹೆಬ್ಬಾವು ರಕ್ಷಣೆ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿಕೋಡಿಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ರೈತ ಬೋರಯ್ಯ ಜಮೀನಿನಲ್ಲಿ ಭಾರಿ ಗಾತ್ರದ 9 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿತು. ಗ್ರಾಮದ ವೆಂಕಟೇಶ್ ಅವರು ಜಮೀನಿನಲ್ಲಿ ಹಸುಗಳಿಗೆ ಸೀಮೆ ಹುಲ್ಲು ಕುಯ್ಯಲು ಹೋಗಿದ್ದರು. ಸೀಮೆ ಹುಲ್ಲಿನ ನಡುವೆ ಕಾಣಿಸಿಕೊಂಡ ಭಾರಿ ಗಾತ್ರದ ಹೆಬ್ಬಾವನ್ನು ಕಂಡು ತೀವ್ರ ಭಯಗೊಂಡಿದ್ದಾನೆ. ತಕ್ಷಣ ಹಲಗೂರಿನ ಸ್ನೇಕ್ ಜಗದೀಶ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಗದೀಶ್ ಮತ್ತು ಸಹಾಯಕ ಕೃಷ್ಣ ಹಾವನ್ನು ಸೆರೆ ಹಿಡಿದು ಬಸವನಬೆಟ್ಟ ಅರಣ್ಯ ಪ್ರದೇಶಕ್ಕೆ ಬಿಡಲು ಅರಣ್ಯ ಇಲಾಖೆ ಸಿಬ್ಬಂದಿಗೆ ನೆರವಾದರು. ಹಾವುಗಳು ಶೀತ ಪ್ರದೇಶವನ್ನು ಹುಡುಕಿಕೊಂಡು ಬರುತ್ತವೆ. ಆದ್ದರಿಂದ ಜನ ವಸತಿ ಪ್ರದೇಶ, ಜಮೀನು ಪ್ರದೇಶಗಳಲ್ಲಿ ಯಾವುದೇ ಬಗೆಯ ಹಾವುಗಳು ಕಂಡು ಬಂದರೇ ಮೊ.ನಂಬರ್ ಗೆ 8431500189 ಕರೆ ಮಾಡಿದರೆ, ಎಲ್ಲಾ ಬಗೆಯ ಹಾವುಗಳನ್ನು ಸುರಕ್ಷಿತವಾಗಿ ಸೆರೆ ಹಿಡಿದು ಸಂರಕ್ಷಿತ ಪ್ರದೇಶಕ್ಕೆ ಬಿಡಲಾಗುವುದು ಎಂದು ಉರಗ ಪ್ರೇಮಿ ಜಗದೀಶ್ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago