ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.
ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. ಈ ಹಿನ್ನೆಲೆಯಲ್ಲಿ ತಂದೆಯ ಆರೋಗ್ಯ ವಿಚಾರಿಸಿಕೊಂಡು ಹಾಗೂ ಹೊಸ ಬಟ್ಟೆ ಖರೀದಿಸಲೆಂದು ನಗರಕ್ಕೆ ಆಗಮಿಸಿದ್ದನು.
ತಂದೆಯ ಆರೋಗ್ಯ ವಿಚಾರಿಸಿ ಹೊರಬರುತ್ತಿದ್ದಂತೆ ಜೋರು ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದನು. ದುರಾದೃಷ್ಟವಶಾತ್ ಬೃಹತ್ ಗಾತ್ರದ ಮರ ಕಾರಿನ ಮೇಲೆ ಬಿದ್ದು ಸ್ಥಳದಲ್ಲಿಯೇ ಕಾರ್ತಿಕ್ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಕ್ರೇನ್ ಸಹಾಯದಿಂದ ಮರ ತೆರವು ಮಾಡಿದರು. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…