ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.
ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. ಈ ಹಿನ್ನೆಲೆಯಲ್ಲಿ ತಂದೆಯ ಆರೋಗ್ಯ ವಿಚಾರಿಸಿಕೊಂಡು ಹಾಗೂ ಹೊಸ ಬಟ್ಟೆ ಖರೀದಿಸಲೆಂದು ನಗರಕ್ಕೆ ಆಗಮಿಸಿದ್ದನು.
ತಂದೆಯ ಆರೋಗ್ಯ ವಿಚಾರಿಸಿ ಹೊರಬರುತ್ತಿದ್ದಂತೆ ಜೋರು ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದನು. ದುರಾದೃಷ್ಟವಶಾತ್ ಬೃಹತ್ ಗಾತ್ರದ ಮರ ಕಾರಿನ ಮೇಲೆ ಬಿದ್ದು ಸ್ಥಳದಲ್ಲಿಯೇ ಕಾರ್ತಿಕ್ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಕ್ರೇನ್ ಸಹಾಯದಿಂದ ಮರ ತೆರವು ಮಾಡಿದರು. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…