Categories: ಮಂಡ್ಯ

ರಂಗನತಿಟ್ಟಿನಲ್ಲಿ 3 ಹೊಸ ವಿಹಾರ ದೋಣಿಗಳ ಲೋಕಾರ್ಪಣೆ: ಈಶ್ವರಖಂಡ್ರೆ

ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದು 3 ಹೊಸ ವಿಹಾರ ದೋಣಿಗಳನ್ನು ಉದ್ಘಾಟಿಸಿದ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಕರ್ಯ ಒದಗಿಸಲು ಮತ್ತು ರಂಗನತಿಟ್ಟಿನ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ಸೂಚನೆ ನೀಡಿದರು.

ರಂಗನತಿಟ್ಟಿನಲ್ಲಿ ಈಗಾಗಲೇ ಇರುವ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಂದು ಉದ್ಘಾಟಿಸಲಾದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಸಲಹೆ ನೀಡಿದರು.

ಆನ್ ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ:
ಅರಣ್ಯ ಇಲಾಖೆಯ ಚಾರಣ, ಸಫಾರಿ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ತಾಣದಲ್ಲಿ ರಂಗನತಿಟ್ಟು ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಆಗುವಂತೆ ಪ್ರವೇಶದ ಟಿಕೆಟ್ ಮತ್ತು ದೋಣಿ ವಿಹಾರದ ಟಿಕೆಟ್ ಕಾಯ್ದಿರಿಸುವ ಅವಕಾಶ ಕಲ್ಪಿಸಲು ಸೂಚಿಸಿದರು.

ಗೆಂಡೆಹೊಸಹಳ್ಳಿ ದ್ವೀಪ ಅಭಿವೃದ್ಧಿಗೆ ಪ್ರಸ್ತಾವನೆ ಮಂಡಿಸಲು ಸೂಚನೆ 
ರಂಗನತಿಟ್ಟು ಬಳಿಯ ಗೆಂಡೆ ಹೊಸಹಳ್ಳಿ ದ್ವೀಪದಲ್ಲಿ ಕೂಡ ನೂರಾರು ಬಗೆಯ ಪಕ್ಷಿಗಳು ಬಂದು ಗೂಡುಕಟ್ಟಿ, ಸಂತಾನೋತ್ಪತ್ತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ದ್ವೀಪವನ್ನು ಕೂಡ ರಂಗನತಿಟ್ಟು ರೀತಿಯಲ್ಲೇ ಅಭಿವೃದ್ದಿ ಪಡಿಸಿ, ಪ್ರವಾಸಿ ತಾಣವಾಗಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.

ದೋಣಿವಿಹಾರ ನಡೆಸಿದ ಅರಣ್ಯ ಸಚಿವರು
ಕಾವೇರಿ ನದಿಯಲ್ಲಿ ದೋಣಿವಿಹಾರ ನಡೆಸಿದ ಅರಣ್ಯ ಸಚಿವರು ಬಂಡೆಗಳ ಮೇಲೆ ಮಲಗಿದ್ದ ಬೃಹತ್ ಗಾತ್ರದ ಮೊಸಳೆಗಳು, ದೂರ ದೂರದಿಂದ ಸಂತಾನೋತ್ಪತ್ತಿಗಾಗಿ ಆಗಮಿಸಿರುವ ಪೆಲಿಕಾನ್, ರಿವರ್ ಟರ್ನ್, ಕಾರ್ಮೊರೆಂಟ್, ಪೈಡ್ ಕಿಂಗ್ ಫಿಷರ್ ಮೊದಲಾದ ಪಕ್ಷಿಗಳನ್ನು ವೀಕ್ಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago