Categories: ಮಂಡ್ಯ

ರಂಗನತಿಟ್ಟಿನಲ್ಲಿ 3 ಹೊಸ ವಿಹಾರ ದೋಣಿಗಳ ಲೋಕಾರ್ಪಣೆ: ಈಶ್ವರಖಂಡ್ರೆ

ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದು 3 ಹೊಸ ವಿಹಾರ ದೋಣಿಗಳನ್ನು ಉದ್ಘಾಟಿಸಿದ ತರುವಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಕರ್ಯ ಒದಗಿಸಲು ಮತ್ತು ರಂಗನತಿಟ್ಟಿನ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ಸೂಚನೆ ನೀಡಿದರು.

ರಂಗನತಿಟ್ಟಿನಲ್ಲಿ ಈಗಾಗಲೇ ಇರುವ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಂದು ಉದ್ಘಾಟಿಸಲಾದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಸಲಹೆ ನೀಡಿದರು.

ಆನ್ ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ:
ಅರಣ್ಯ ಇಲಾಖೆಯ ಚಾರಣ, ಸಫಾರಿ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ತಾಣದಲ್ಲಿ ರಂಗನತಿಟ್ಟು ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಆಗುವಂತೆ ಪ್ರವೇಶದ ಟಿಕೆಟ್ ಮತ್ತು ದೋಣಿ ವಿಹಾರದ ಟಿಕೆಟ್ ಕಾಯ್ದಿರಿಸುವ ಅವಕಾಶ ಕಲ್ಪಿಸಲು ಸೂಚಿಸಿದರು.

ಗೆಂಡೆಹೊಸಹಳ್ಳಿ ದ್ವೀಪ ಅಭಿವೃದ್ಧಿಗೆ ಪ್ರಸ್ತಾವನೆ ಮಂಡಿಸಲು ಸೂಚನೆ 
ರಂಗನತಿಟ್ಟು ಬಳಿಯ ಗೆಂಡೆ ಹೊಸಹಳ್ಳಿ ದ್ವೀಪದಲ್ಲಿ ಕೂಡ ನೂರಾರು ಬಗೆಯ ಪಕ್ಷಿಗಳು ಬಂದು ಗೂಡುಕಟ್ಟಿ, ಸಂತಾನೋತ್ಪತ್ತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ದ್ವೀಪವನ್ನು ಕೂಡ ರಂಗನತಿಟ್ಟು ರೀತಿಯಲ್ಲೇ ಅಭಿವೃದ್ದಿ ಪಡಿಸಿ, ಪ್ರವಾಸಿ ತಾಣವಾಗಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.

ದೋಣಿವಿಹಾರ ನಡೆಸಿದ ಅರಣ್ಯ ಸಚಿವರು
ಕಾವೇರಿ ನದಿಯಲ್ಲಿ ದೋಣಿವಿಹಾರ ನಡೆಸಿದ ಅರಣ್ಯ ಸಚಿವರು ಬಂಡೆಗಳ ಮೇಲೆ ಮಲಗಿದ್ದ ಬೃಹತ್ ಗಾತ್ರದ ಮೊಸಳೆಗಳು, ದೂರ ದೂರದಿಂದ ಸಂತಾನೋತ್ಪತ್ತಿಗಾಗಿ ಆಗಮಿಸಿರುವ ಪೆಲಿಕಾನ್, ರಿವರ್ ಟರ್ನ್, ಕಾರ್ಮೊರೆಂಟ್, ಪೈಡ್ ಕಿಂಗ್ ಫಿಷರ್ ಮೊದಲಾದ ಪಕ್ಷಿಗಳನ್ನು ವೀಕ್ಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago