ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾವೇರಿ ನೀರಿನ ವಿಷಯ ಬಹಳ ಹಿಂದಿನ ಕಾಲದ್ದಾಗಿದೆ. ಕಾಂಗ್ರೆಸ್, ಜಾ.ದಳ ಹಾಗೂ ಬಿಜೆಪಿ ಸರ್ಕಾರಗಳು ಕಾವೇರಿ ನೀರಿನ ವಿಷಯವಾಗಿ ಸಮಸ್ಯೆಗಳನ್ನು ಎದುರಿಸಿವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತುತ ಎದುರಾಗಿರುವ ಕಾವೇರಿ ಸಮಸ್ಯೆ ಬಗ್ಗೆ ಕಾನೂನು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸರ್ವ ಪಕ್ಷದ ಸಭೆ ಮಾಡುವ ಮೂಲಕ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಗಮನಹರಿಸಿದ್ದೇವೆ ಎಂದರು.
ದೀರ್ಘಾವಧಿ ಬೆಳೆಗೂ ಪರಿಹಾರ : ದೀರ್ಘಾವಧಿ ಬೆಳೆಗೂ ಕೂಡ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಚರ್ಚೆ ಮಾಡಿ ನ್ಯಾಯ ಒದಗಿಸಲಾಗುವುದು. ರಾಜ್ಯದಲ್ಲಿ ಬಹುತೇಕ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಮಳೆ ಅಭಾವದಿಂದ ಬರಪೀಡಿತ ಘೋಷಣೆ ಮಾಡಲು ಈಗಾಗಲೇ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಬರಪೀಡಿತ ತಾಲ್ಲೂಕು ಹಾಗೂ ಜಿಲ್ಲೆಗಳನ್ನು ಘೋಷಣೆ ಮಾಡಿ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
25 ವರ್ಷಗಳಿಂದ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ : ಶಾಸಕ ಕದಲೂರು ಉದಯ್ ಮಾತನಾಡಿ, ಸುಮಾರು 25 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಕ್ಷೇತ್ರದ ಜನತೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತಾಲ್ಲೂಕು ಕಚೇರಿಯಲ್ಲಿ ಅಧಿಕಾರ ಸಿಗುವುದರಿಂದ ರೈತರ ಸಮಸ್ಯೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನದಾಗಿರುವುದರಿಂದ ತಾಲ್ಲೂಕು ಕಚೇರಿಯಲ್ಲಿ ಕಚೇರಿ ತೆರೆದಿದ್ದೇನೆ ಎಂದರು.
ವಾರದಲ್ಲಿ ಎರಡು ದಿನ ಕಚೇರಿಯಲ್ಲಿ ಕಾರ್ಯನಿರ್ವಹಿಸಲಾಗುವುದು. ಸಾರ್ವಜನಿಕರಿಗೆ, ರೈತರಿಗೆ ಸ್ಥಳದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈಗಾಗಲೇ ಬಹುತೇಕ ಎಲ್ಲ ಇಲಾಖೆಗಳಲ್ಲೂ ಹೊಸ ಅಧಿಕಾರಿಗಳು ಬಂದಿದ್ದಾರೆ, ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಹೇಳಿದರು.
ಜನಸಾಮಾನ್ಯರ ಬಳಿ ಲಂಚ ಪಡೆಯದೆ ಅಧಿಕಾರಿಗಳು ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ ಹಾಗೂ ಕಚೇರಿಗಳನ್ನು ಶುಚಿಯಾಗಿ ಇಟ್ಟುಕೊಳ್ಳುವುದರ ಮೂಲಕ ಉತ್ತಮ ಪರಿಸರವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದರು.
ತಾಲ್ಲೂಕು ಕಚೇರಿಯ ಮೇಲಂತಸ್ತು ಮಳೆ ನೀರಿನಿಂದ ಸೋರುತ್ತಿದ್ದು, ಅದರ ನವೀಕರಣಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಎರಡೂವರೆ ಕೋಟಿ ರೂ.ಗಳ ಅನುದಾನ ನೀಡುವಂತೆ ಕೋರಿದ್ದೇನೆ ಎಂದು ತಿಳಿಸಿದರು.
ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಬೈಕ್ ರ್ಯಾಲಿಯ ಮೂಲಕ ತಾಲ್ಲೂಕು ಕಚೇರಿವರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಕರೆತಂದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಟಿ. ಶಂಕರ್, ತಾ.ಪಂ. ಮಾಜಿ ಸದಸ್ಯರಾದ ಚಲುವರಾಜು, ಕೆ.ಆರ್.ಮಹೇಶ್, ಗ್ರಾಮ ಪಂಚಾಯತಿ ಸದಸ್ಯ ಮಧು, ಜಿಪಂ ಮಾಜಿ ಸದಸ್ಯ ರಾಜೀವ್, ಪುರಸಭಾ ಸದಸ್ಯರಾದ ಸಚಿನ್, ಮನೋಜ್, ಸಿದ್ದು, ಅಜ್ಜಹಳ್ಳಿ ರಾಮಕೃಷ್ಣ ಇತರರಿದ್ದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…