ಮಂಡ್ಯ

ಚಿರತೆ ದಾಳಿ : ನಾಲ್ಕು ಮೇಕೆ ಬಲಿ

ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ.

ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಚಂದ್ರಮ್ಮ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ನಡೆಸಿದರು.

ಈ ಭಾಗದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದೆ. ಮೇಕೆ, ಕುರಿ, ಕರು, ನಾಯಿಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಇನ್ನಾದರೂ ಅಽಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಬೋನು ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago