ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ.
ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ ಹಾಲು ಕರೆಯುವ ಎಮ್ಮೆಯ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿರುವ ಚಿರತೆ ಭಾಗಶಃ ತಿಂದು ಹಾಕಿದೆ.
ಕಳೆದ ನಾಲ್ಕು ತಿಂಗಳಲ್ಲಿ ಐದು ಬಾರಿ ದಾಳಿ ನಡೆಸಿರುವ ಚಿರತೆಯು ಎಮ್ಮೆ, ಹಸು, ಸಾಕು ನಾಯಿ ಸೇರಿದಂತೆ ಹಲವು ಸಾಕು ಪ್ರಾಣಿಗಳನ್ನು ತಿಂದು ಹಾಕಿದ್ದು, ಗ್ರಾಮಸ್ಥರು ಹಾಗೂ ಜಮೀನಿನಲ್ಲಿ ಕೆಲಸ ಮಾಡುವ ರೈತರು ಹಾಗೂ ದನಗಾಹಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಬಿ.ಕೋಡಿಹಳ್ಳಿ, ಅಗ್ರಹಾರಬಾಚಹಳ್ಳಿ, ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಸೆರೆ ಹಿಡಿಯಬೇಕು, ಜನರ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ, ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಡಾ.ಎಚ್.ಎಸ್.ದೇವರಾಜು, ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ, ಗ್ರಾಮ ಲೆಕ್ಕಾಧಿಕಾರಿ ಸುನಿಲ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…