ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಟ್ಟು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಮದುಗೆರೆ ಗ್ರಾಮದ ರೈತ ರವೀಶ್ ಅವರಿಗೆ ಸೇರಿದ 3 ಮೇಕೆಗಳನ್ನು ಒಂದೇ ದಿನ ಹೊತ್ತೊಯ್ದು ತಿಂದು ಹಾಕುವ ಮೂಲಕ ಆತಂಕ ಸೃಷ್ಠಿಸಿದ್ದ ಚಿರತೆಯು ಕಳೆದ ಒಂದು ವಾರದಿಂದ ನಿತ್ಯ ಮದುಗೆರೆ ಗ್ರಾಮದ ಕಾಳಶೆಟ್ಟಿ, ತಿಮ್ಮಮ್ಮ, ದೊಡ್ಡಶೆಟ್ಟಿ, ಸಂಪಿಗೆಶೆಟ್ಟಿ, ಕೃಷ್ಣೇಗೌಡ ಅವರ ಜಮೀನಿನ ಬಳಿ ಕಾಣಿಸಿಕೊಂಡು ಸಾಕು ಪ್ರಾಣಿಗಳನ್ನು ತಿನ್ನಲು ಹೊಂಚು ಹಾಕುತ್ತಿತ್ತು. ಇದನ್ನು ಕಣ್ಣಾರೆ ಕಂಡ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಲನ-ವಲದದ ಬಗ್ಗೆ ಮಾಹಿತಿ ನೀಡಿ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ(ಆರ್.ಎಫ್.ಓ) ಅನಿತಾ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದಕುಮಾರ್ ನೇತೃತ್ವದಲ್ಲಿ ಗುರುವಾರ ರಾತ್ರಿ ಬೋನಿಟ್ಟು ಕಾರ್ಯಾಚರಣೆ ನಡೆಸಿದ್ದರು. ಚಿರತೆಯು ಶುಕ್ರವಾರ ಬೆಳಿಗ್ಗೆ ಬೋನಿನಲ್ಲಿ ಸೆರೆಯಾಗಿದೆ. ಇದರಿಂದಾಗಿ ಮದುಗೆರೆ, ಮತ್ತೀಕೆರೆ ಗ್ರಾಮಗಳ ರೈತರಲ್ಲಿ ಆವರಿಸಿದ್ದ ಆತಂಕ ದೂರವಾಗಿದೆ. ಗ್ರಾಮಸ್ಥರ ದೂರನ್ನು ಆಲಿಸಿ ಸಕಾಲಕ್ಕೆ ಬೋನಿಟ್ಟು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿರುವ ಆರ್.ಎಫ್.ಓ ಅನಿತಾ ಹಾಗೂ ಎ.ಆರ್.ಎಫ್.ಓ ನಂದಕುಮಾರ್ ಮತ್ತು ಸಿಬ್ಬಂದಿ ವರ್ಗದವರನ್ನು ಮುದುಗೆರೆ ಗ್ರಾಮಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…