ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಟ್ಟು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಮದುಗೆರೆ ಗ್ರಾಮದ ರೈತ ರವೀಶ್ ಅವರಿಗೆ ಸೇರಿದ 3 ಮೇಕೆಗಳನ್ನು ಒಂದೇ ದಿನ ಹೊತ್ತೊಯ್ದು ತಿಂದು ಹಾಕುವ ಮೂಲಕ ಆತಂಕ ಸೃಷ್ಠಿಸಿದ್ದ ಚಿರತೆಯು ಕಳೆದ ಒಂದು ವಾರದಿಂದ ನಿತ್ಯ ಮದುಗೆರೆ ಗ್ರಾಮದ ಕಾಳಶೆಟ್ಟಿ, ತಿಮ್ಮಮ್ಮ, ದೊಡ್ಡಶೆಟ್ಟಿ, ಸಂಪಿಗೆಶೆಟ್ಟಿ, ಕೃಷ್ಣೇಗೌಡ ಅವರ ಜಮೀನಿನ ಬಳಿ ಕಾಣಿಸಿಕೊಂಡು ಸಾಕು ಪ್ರಾಣಿಗಳನ್ನು ತಿನ್ನಲು ಹೊಂಚು ಹಾಕುತ್ತಿತ್ತು. ಇದನ್ನು ಕಣ್ಣಾರೆ ಕಂಡ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಲನ-ವಲದದ ಬಗ್ಗೆ ಮಾಹಿತಿ ನೀಡಿ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ(ಆರ್.ಎಫ್.ಓ) ಅನಿತಾ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದಕುಮಾರ್ ನೇತೃತ್ವದಲ್ಲಿ ಗುರುವಾರ ರಾತ್ರಿ ಬೋನಿಟ್ಟು ಕಾರ್ಯಾಚರಣೆ ನಡೆಸಿದ್ದರು. ಚಿರತೆಯು ಶುಕ್ರವಾರ ಬೆಳಿಗ್ಗೆ ಬೋನಿನಲ್ಲಿ ಸೆರೆಯಾಗಿದೆ. ಇದರಿಂದಾಗಿ ಮದುಗೆರೆ, ಮತ್ತೀಕೆರೆ ಗ್ರಾಮಗಳ ರೈತರಲ್ಲಿ ಆವರಿಸಿದ್ದ ಆತಂಕ ದೂರವಾಗಿದೆ. ಗ್ರಾಮಸ್ಥರ ದೂರನ್ನು ಆಲಿಸಿ ಸಕಾಲಕ್ಕೆ ಬೋನಿಟ್ಟು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿರುವ ಆರ್.ಎಫ್.ಓ ಅನಿತಾ ಹಾಗೂ ಎ.ಆರ್.ಎಫ್.ಓ ನಂದಕುಮಾರ್ ಮತ್ತು ಸಿಬ್ಬಂದಿ ವರ್ಗದವರನ್ನು ಮುದುಗೆರೆ ಗ್ರಾಮಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…