ಮಂಡ್ಯ

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಟ್ಟು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮದುಗೆರೆ ಗ್ರಾಮದ ರೈತ ರವೀಶ್ ಅವರಿಗೆ ಸೇರಿದ 3 ಮೇಕೆಗಳನ್ನು ಒಂದೇ ದಿನ ಹೊತ್ತೊಯ್ದು ತಿಂದು ಹಾಕುವ ಮೂಲಕ ಆತಂಕ ಸೃಷ್ಠಿಸಿದ್ದ ಚಿರತೆಯು ಕಳೆದ ಒಂದು ವಾರದಿಂದ ನಿತ್ಯ ಮದುಗೆರೆ ಗ್ರಾಮದ ಕಾಳಶೆಟ್ಟಿ, ತಿಮ್ಮಮ್ಮ, ದೊಡ್ಡಶೆಟ್ಟಿ, ಸಂಪಿಗೆಶೆಟ್ಟಿ, ಕೃಷ್ಣೇಗೌಡ ಅವರ ಜಮೀನಿನ ಬಳಿ ಕಾಣಿಸಿಕೊಂಡು ಸಾಕು ಪ್ರಾಣಿಗಳನ್ನು ತಿನ್ನಲು ಹೊಂಚು ಹಾಕುತ್ತಿತ್ತು. ಇದನ್ನು ಕಣ್ಣಾರೆ ಕಂಡ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಲನ-ವಲದದ ಬಗ್ಗೆ ಮಾಹಿತಿ ನೀಡಿ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ(ಆರ್.ಎಫ್.ಓ) ಅನಿತಾ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದಕುಮಾರ್ ನೇತೃತ್ವದಲ್ಲಿ ಗುರುವಾರ ರಾತ್ರಿ ಬೋನಿಟ್ಟು ಕಾರ್ಯಾಚರಣೆ ನಡೆಸಿದ್ದರು. ಚಿರತೆಯು ಶುಕ್ರವಾರ ಬೆಳಿಗ್ಗೆ ಬೋನಿನಲ್ಲಿ ಸೆರೆಯಾಗಿದೆ. ಇದರಿಂದಾಗಿ ಮದುಗೆರೆ, ಮತ್ತೀಕೆರೆ ಗ್ರಾಮಗಳ ರೈತರಲ್ಲಿ ಆವರಿಸಿದ್ದ ಆತಂಕ ದೂರವಾಗಿದೆ. ಗ್ರಾಮಸ್ಥರ ದೂರನ್ನು ಆಲಿಸಿ ಸಕಾಲಕ್ಕೆ ಬೋನಿಟ್ಟು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿರುವ ಆರ್.ಎಫ್.ಓ ಅನಿತಾ ಹಾಗೂ ಎ.ಆರ್.ಎಫ್.ಓ ನಂದಕುಮಾರ್ ಮತ್ತು ಸಿಬ್ಬಂದಿ ವರ್ಗದವರನ್ನು ಮುದುಗೆರೆ ಗ್ರಾಮಸ್ಥರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago