Mysore
22
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.

ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆ ನಂತರ ಸಂರಕ್ಷಣೆಗಾಗಿ ಮೈಸೂರಿಗೆ ಕಳುಹಿಸಿಕೊಡಲಾಗುವುದು ಎಂದರು.

Tags:
error: Content is protected !!