ಕೆ.ಆರ್.ಪೇಟೆ : ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ವರ್ಷದ ಚಿರತೆಯು ಸೆರೆಯಾಗಿದೆ.
ಮಲ್ಲೇನಹಳ್ಳಿ ಗ್ರಾಮದ ಸ.ನಂ.೩೧ರಲ್ಲಿರುವ ರಾಜೇಗೌಡರ ಪುತ್ರ ಮಂಜೇಗೌಡ ಎಂಬವರ ಜಮೀನಿನಲ್ಲಿ ಹಲವು ದಿನಗಳಿಂದ ಚಿರತೆಯು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ತಾಲ್ಲೂಕು ಅರಣ್ಯ ಇಲಾಖೆಯ ಆರ್ಎಫ್ಒ ಅನಿತಾ ಅವರ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಬೋನು ಇರಿಸಲಾಗಿತ್ತು.
ಶನಿವಾರ ಮುಂಜಾನೆ ಚಿರತೆಯು ಬೋನಿನಲ್ಲಿ ಸೆರೆಯಾಗಿದೆ. ಇದರಿಂದ ಮಲ್ಲೇನಹಳ್ಳಿ, ಕುಂದನಹಳ್ಳಿ, ಬಿ.ಬಿ.ಕಾವಲು, ಬಂಡಿಹೊಳೆ, ಸಾಧುಗೋನಹಳ್ಳಿ ಮತ್ತಿತರ ಗ್ರಾಮಗಳ ರೈತರಲ್ಲಿ ಉಂಟಾಗಿದ್ದ ಆತಂಕ ದೂರವಾಗಿದೆ.
ಇದನ್ನು ಓದಿ: ಟಿಜೆಎಸ್ ಜಾರ್ಜ್ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ : ಎಂಎಲ್ಸಿ ಕೆ. ಶಿವಕುಮಾರ್ ಘೋಷಣೆ
ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ನಂದಕುಮಾರ್, ಪ್ರಶಾಂತ್, ಸಿಬ್ಬಂದಿ ಸಂಜಯ್, ರಂಗಸ್ವಾಮಿ, ಶ್ರೀಧರ್, ಚಿರತೆ ಕ್ರಿಪ್ರ ಕಾರ್ಯಪಡೆ ಸಿಬ್ಬಂದಿ ಅಭಿಲಾಷ್, ನಿರಂಜನ್, ರಾಜೇಶ್, ಕಾರ್ತಿಕ್, ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಬಂಡೀಪುರ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು ಎಂದು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅವರು ತಾಲ್ಲೂಕಿನಲ್ಲಿ ಚಿರತೆಗಳು ಎಲ್ಲೇ ಕಾಣಿಸಿಕೊಂಡರೂ ತಕ್ಷಣ ನಮಗೆ ಮಾಹಿತಿ ನೀಡಬೇಕು. ಇಲಾಖೆಯ ವತಿಯಿಂದ ಚಿರತೆಯನ್ನು ಹಿಡಿದು ಅರಣ್ಯಕ್ಕೆ ಬಿಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…