ಮಂಡ್ಯ

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಹೊರವಲಯದ ಪೂಜಾರಿ ಚನ್ನಪ್ಪ ಅವರಿಗೆ ಸೇರಿದ ತೋಟದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ತಿಂಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಚಿರತೆ ಸೆರೆ ಸಿಕ್ಕಂತಾಗಿದೆ.

ಕಳೆದ ಮೇ 6 ರಂದು ಇದೇ ಸ್ಥಳದಲ್ಲಿ ಚಿರತೆ ಸೆರೆಯಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಸೋಮವಾರ ಮತ್ತೊಂದು ಚಿರತೆ ಸೆರೆಯಾಗಿದೆ.

ಚಿಕ್ಕಮರಳಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಪದೇ ಪದೇ ಜಮೀನಿಗೆ ಹೋದ ರೈತರ ಕಣ್ಣಿಗೆ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದವು. ಚಿರತೆ ಕಾಣಿಸಿಕೊಳ್ಳುವ ವಿಷಯವನ್ನು ರೈತರು ಅರಣ್ಯಾಧಿಕಾರಿಗಳಿಗೆ ಮುಟ್ಟಿಸಿದ್ದರು. ವಿಷಯ ತಿಳಿದ ಅಧಿಕಾರಿಗಳು ಚಿಕ್ಕಮರಳಿ ಗ್ರಾಮದ ಹೊರವಲಯದ ನವಿಲು ಬೆಟ್ಟದ ತಪ್ಪಲ್ಲಿನಲ್ಲಿರುವ ಪೂಜಾರಿ ಚನ್ನಪ್ಪ ಎಂಬುವರಿಗೆ ಸೇರಿದ ತೋಟದಲ್ಲಿ ಬೋನು ಇರಿಸಿದ್ದರು. ಮೇ 6ರಂದು ಚಿರತೆ ಸೆರೆಯಾಯಿತು. ಅದಾದ ಬಳಿಕವೂ ಸಹ ಚಿರತೆಗಳು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಮತ್ತೊಂದು ಬೋನನ್ನು ಅರಣ್ಯಾಧಿಕಾರಿಗಳು ಇರಿಸಿದ್ದರು.

ಆ ಬೋನಿಗೆ ಸೋಮವಾರ ಮುಂಜಾನೆ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಚಿರತೆ ನೋಡಲು ಮುಗಿಬಿದ್ದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಸೆರೆಸಿಕ್ಕ ಚಿರತೆಯನ್ನು ಕೊಂಡೊಯ್ದರು.
ಸೆರೆಸಿಕ್ಕ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಬಂಡೀಪುರ ಅಥವಾ ನಾಗರಹೊಳೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.

lokesh

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

27 mins ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

49 mins ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

1 hour ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

1 hour ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

2 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

2 hours ago