ಮಂಡ್ಯ

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಹೊರವಲಯದ ಪೂಜಾರಿ ಚನ್ನಪ್ಪ ಅವರಿಗೆ ಸೇರಿದ ತೋಟದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ತಿಂಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಚಿರತೆ ಸೆರೆ ಸಿಕ್ಕಂತಾಗಿದೆ.

ಕಳೆದ ಮೇ 6 ರಂದು ಇದೇ ಸ್ಥಳದಲ್ಲಿ ಚಿರತೆ ಸೆರೆಯಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಸೋಮವಾರ ಮತ್ತೊಂದು ಚಿರತೆ ಸೆರೆಯಾಗಿದೆ.

ಚಿಕ್ಕಮರಳಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಪದೇ ಪದೇ ಜಮೀನಿಗೆ ಹೋದ ರೈತರ ಕಣ್ಣಿಗೆ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದವು. ಚಿರತೆ ಕಾಣಿಸಿಕೊಳ್ಳುವ ವಿಷಯವನ್ನು ರೈತರು ಅರಣ್ಯಾಧಿಕಾರಿಗಳಿಗೆ ಮುಟ್ಟಿಸಿದ್ದರು. ವಿಷಯ ತಿಳಿದ ಅಧಿಕಾರಿಗಳು ಚಿಕ್ಕಮರಳಿ ಗ್ರಾಮದ ಹೊರವಲಯದ ನವಿಲು ಬೆಟ್ಟದ ತಪ್ಪಲ್ಲಿನಲ್ಲಿರುವ ಪೂಜಾರಿ ಚನ್ನಪ್ಪ ಎಂಬುವರಿಗೆ ಸೇರಿದ ತೋಟದಲ್ಲಿ ಬೋನು ಇರಿಸಿದ್ದರು. ಮೇ 6ರಂದು ಚಿರತೆ ಸೆರೆಯಾಯಿತು. ಅದಾದ ಬಳಿಕವೂ ಸಹ ಚಿರತೆಗಳು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಮತ್ತೊಂದು ಬೋನನ್ನು ಅರಣ್ಯಾಧಿಕಾರಿಗಳು ಇರಿಸಿದ್ದರು.

ಆ ಬೋನಿಗೆ ಸೋಮವಾರ ಮುಂಜಾನೆ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಚಿರತೆ ನೋಡಲು ಮುಗಿಬಿದ್ದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಸೆರೆಸಿಕ್ಕ ಚಿರತೆಯನ್ನು ಕೊಂಡೊಯ್ದರು.
ಸೆರೆಸಿಕ್ಕ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಬಂಡೀಪುರ ಅಥವಾ ನಾಗರಹೊಳೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.

lokesh

Recent Posts

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 mins ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

38 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

2 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago