ಮಂಡ್ಯ

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಹೊರವಲಯದ ಪೂಜಾರಿ ಚನ್ನಪ್ಪ ಅವರಿಗೆ ಸೇರಿದ ತೋಟದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ತಿಂಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಚಿರತೆ ಸೆರೆ ಸಿಕ್ಕಂತಾಗಿದೆ.

ಕಳೆದ ಮೇ 6 ರಂದು ಇದೇ ಸ್ಥಳದಲ್ಲಿ ಚಿರತೆ ಸೆರೆಯಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಸೋಮವಾರ ಮತ್ತೊಂದು ಚಿರತೆ ಸೆರೆಯಾಗಿದೆ.

ಚಿಕ್ಕಮರಳಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಪದೇ ಪದೇ ಜಮೀನಿಗೆ ಹೋದ ರೈತರ ಕಣ್ಣಿಗೆ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದವು. ಚಿರತೆ ಕಾಣಿಸಿಕೊಳ್ಳುವ ವಿಷಯವನ್ನು ರೈತರು ಅರಣ್ಯಾಧಿಕಾರಿಗಳಿಗೆ ಮುಟ್ಟಿಸಿದ್ದರು. ವಿಷಯ ತಿಳಿದ ಅಧಿಕಾರಿಗಳು ಚಿಕ್ಕಮರಳಿ ಗ್ರಾಮದ ಹೊರವಲಯದ ನವಿಲು ಬೆಟ್ಟದ ತಪ್ಪಲ್ಲಿನಲ್ಲಿರುವ ಪೂಜಾರಿ ಚನ್ನಪ್ಪ ಎಂಬುವರಿಗೆ ಸೇರಿದ ತೋಟದಲ್ಲಿ ಬೋನು ಇರಿಸಿದ್ದರು. ಮೇ 6ರಂದು ಚಿರತೆ ಸೆರೆಯಾಯಿತು. ಅದಾದ ಬಳಿಕವೂ ಸಹ ಚಿರತೆಗಳು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಮತ್ತೊಂದು ಬೋನನ್ನು ಅರಣ್ಯಾಧಿಕಾರಿಗಳು ಇರಿಸಿದ್ದರು.

ಆ ಬೋನಿಗೆ ಸೋಮವಾರ ಮುಂಜಾನೆ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಚಿರತೆ ನೋಡಲು ಮುಗಿಬಿದ್ದರು. ಬಳಿಕ ಆಗಮಿಸಿದ ಅರಣ್ಯಾಧಿಕಾರಿಗಳು ಸೆರೆಸಿಕ್ಕ ಚಿರತೆಯನ್ನು ಕೊಂಡೊಯ್ದರು.
ಸೆರೆಸಿಕ್ಕ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಬಂಡೀಪುರ ಅಥವಾ ನಾಗರಹೊಳೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.

lokesh

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

18 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

25 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

30 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

35 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

40 mins ago