Mysore
28
broken clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದ ರೈತರ ರಾಜೇಶ್‌ಗೆ ಸಾವಿರಾರು ರೂ. ನಷ್ಟ ಉಂಟಾಗಿದೆ.

ಹಿರೇಮರಳಿ ಗ್ರಾಮದಿಂದ ಚಿಕ್ಕಮರಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವಂತಹ ಆಲೆಮನೆಯ ಬಳಿ ರಾಜೇಶ್ ಅವರು ಕರು ಹಾಗೂ ಮೇಕೆಯನ್ನು ಕಟ್ಟುಹಾಕಿದ್ದರು. ಆಲೆಮನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಮಾಲೀಕರು ರೂಂ ಒಳಗಡೆ ಮಲಗಿದ್ದ ಸಂದರ್ಭದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುಗಳು ಹಾಗೂ ಮೇಕೆಯ ಮೇಲೆ ದಾಳಿ ನಡೆಸಿ ಕರುಗಳನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿದೆ.

ಮಾಲೀಕರು ಸೋಮವಾರ ಬೆಳಿಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕರುವನ್ನು ಆಲೆಮನೆಯ ಬಳಿಯೇ ಬಿಸಾಡಿದ್ದು ಮತ್ತೊಂದು ಕರುವನ್ನು ಕಬ್ಬಿನ ಗದ್ದೆಯ ಬಳಿ ಬಿಸಾಡಿ ಹೋಗಿದೆ. ಮೇಕೆಯನ್ನು ಎಳೆದುಕೊಂಡು ಹೋಗಿದ್ದು ಸಾವಿರಾರು ರೂ. ನಷ್ಟ ಉಂಟಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಲ್ಲಿ ಮೃತಪಟ್ಟ ಕರುಗಳ ಶವಪರೀಕ್ಷೆ ನಡೆಸಿದರು. ಬಳಿಕ ಸರ್ಕಾರದಿಂದ ದೊರೆಯುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಸಾರ್ವಜನಿಕರು ಆತಂಕ
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸುತ್ತಮುತ್ತಲಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಽಕಾರಿಗಳು ಚಿರತೆಗಳ ಸೆರೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

Tags:
error: Content is protected !!