ಮಂಡ್ಯ

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದ ರೈತರ ರಾಜೇಶ್‌ಗೆ ಸಾವಿರಾರು ರೂ. ನಷ್ಟ ಉಂಟಾಗಿದೆ.

ಹಿರೇಮರಳಿ ಗ್ರಾಮದಿಂದ ಚಿಕ್ಕಮರಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವಂತಹ ಆಲೆಮನೆಯ ಬಳಿ ರಾಜೇಶ್ ಅವರು ಕರು ಹಾಗೂ ಮೇಕೆಯನ್ನು ಕಟ್ಟುಹಾಕಿದ್ದರು. ಆಲೆಮನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಮಾಲೀಕರು ರೂಂ ಒಳಗಡೆ ಮಲಗಿದ್ದ ಸಂದರ್ಭದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುಗಳು ಹಾಗೂ ಮೇಕೆಯ ಮೇಲೆ ದಾಳಿ ನಡೆಸಿ ಕರುಗಳನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿದೆ.

ಮಾಲೀಕರು ಸೋಮವಾರ ಬೆಳಿಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕರುವನ್ನು ಆಲೆಮನೆಯ ಬಳಿಯೇ ಬಿಸಾಡಿದ್ದು ಮತ್ತೊಂದು ಕರುವನ್ನು ಕಬ್ಬಿನ ಗದ್ದೆಯ ಬಳಿ ಬಿಸಾಡಿ ಹೋಗಿದೆ. ಮೇಕೆಯನ್ನು ಎಳೆದುಕೊಂಡು ಹೋಗಿದ್ದು ಸಾವಿರಾರು ರೂ. ನಷ್ಟ ಉಂಟಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಲ್ಲಿ ಮೃತಪಟ್ಟ ಕರುಗಳ ಶವಪರೀಕ್ಷೆ ನಡೆಸಿದರು. ಬಳಿಕ ಸರ್ಕಾರದಿಂದ ದೊರೆಯುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಸಾರ್ವಜನಿಕರು ಆತಂಕ
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸುತ್ತಮುತ್ತಲಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಽಕಾರಿಗಳು ಚಿರತೆಗಳ ಸೆರೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

10 mins ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

38 mins ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

4 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

4 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

4 hours ago