ಮಂಡ್ಯ

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದ ರೈತರ ರಾಜೇಶ್‌ಗೆ ಸಾವಿರಾರು ರೂ. ನಷ್ಟ ಉಂಟಾಗಿದೆ.

ಹಿರೇಮರಳಿ ಗ್ರಾಮದಿಂದ ಚಿಕ್ಕಮರಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವಂತಹ ಆಲೆಮನೆಯ ಬಳಿ ರಾಜೇಶ್ ಅವರು ಕರು ಹಾಗೂ ಮೇಕೆಯನ್ನು ಕಟ್ಟುಹಾಕಿದ್ದರು. ಆಲೆಮನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಮಾಲೀಕರು ರೂಂ ಒಳಗಡೆ ಮಲಗಿದ್ದ ಸಂದರ್ಭದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುಗಳು ಹಾಗೂ ಮೇಕೆಯ ಮೇಲೆ ದಾಳಿ ನಡೆಸಿ ಕರುಗಳನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿದೆ.

ಮಾಲೀಕರು ಸೋಮವಾರ ಬೆಳಿಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕರುವನ್ನು ಆಲೆಮನೆಯ ಬಳಿಯೇ ಬಿಸಾಡಿದ್ದು ಮತ್ತೊಂದು ಕರುವನ್ನು ಕಬ್ಬಿನ ಗದ್ದೆಯ ಬಳಿ ಬಿಸಾಡಿ ಹೋಗಿದೆ. ಮೇಕೆಯನ್ನು ಎಳೆದುಕೊಂಡು ಹೋಗಿದ್ದು ಸಾವಿರಾರು ರೂ. ನಷ್ಟ ಉಂಟಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಲ್ಲಿ ಮೃತಪಟ್ಟ ಕರುಗಳ ಶವಪರೀಕ್ಷೆ ನಡೆಸಿದರು. ಬಳಿಕ ಸರ್ಕಾರದಿಂದ ದೊರೆಯುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಸಾರ್ವಜನಿಕರು ಆತಂಕ
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸುತ್ತಮುತ್ತಲಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಽಕಾರಿಗಳು ಚಿರತೆಗಳ ಸೆರೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

9 mins ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

14 mins ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

19 mins ago

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

42 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

1 hour ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

1 hour ago