ಮಂಡ್ಯ

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದ ರೈತರ ರಾಜೇಶ್‌ಗೆ ಸಾವಿರಾರು ರೂ. ನಷ್ಟ ಉಂಟಾಗಿದೆ.

ಹಿರೇಮರಳಿ ಗ್ರಾಮದಿಂದ ಚಿಕ್ಕಮರಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವಂತಹ ಆಲೆಮನೆಯ ಬಳಿ ರಾಜೇಶ್ ಅವರು ಕರು ಹಾಗೂ ಮೇಕೆಯನ್ನು ಕಟ್ಟುಹಾಕಿದ್ದರು. ಆಲೆಮನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಮಾಲೀಕರು ರೂಂ ಒಳಗಡೆ ಮಲಗಿದ್ದ ಸಂದರ್ಭದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುಗಳು ಹಾಗೂ ಮೇಕೆಯ ಮೇಲೆ ದಾಳಿ ನಡೆಸಿ ಕರುಗಳನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿದೆ.

ಮಾಲೀಕರು ಸೋಮವಾರ ಬೆಳಿಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕರುವನ್ನು ಆಲೆಮನೆಯ ಬಳಿಯೇ ಬಿಸಾಡಿದ್ದು ಮತ್ತೊಂದು ಕರುವನ್ನು ಕಬ್ಬಿನ ಗದ್ದೆಯ ಬಳಿ ಬಿಸಾಡಿ ಹೋಗಿದೆ. ಮೇಕೆಯನ್ನು ಎಳೆದುಕೊಂಡು ಹೋಗಿದ್ದು ಸಾವಿರಾರು ರೂ. ನಷ್ಟ ಉಂಟಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಲ್ಲಿ ಮೃತಪಟ್ಟ ಕರುಗಳ ಶವಪರೀಕ್ಷೆ ನಡೆಸಿದರು. ಬಳಿಕ ಸರ್ಕಾರದಿಂದ ದೊರೆಯುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಸಾರ್ವಜನಿಕರು ಆತಂಕ
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸುತ್ತಮುತ್ತಲಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಽಕಾರಿಗಳು ಚಿರತೆಗಳ ಸೆರೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago