ಮಂಡ್ಯ

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, ಮೇಕೆಯನ್ನು ಹೊತ್ತೊಯ್ದಿದೆ. ಇದರಿಂದ ರೈತರ ರಾಜೇಶ್‌ಗೆ ಸಾವಿರಾರು ರೂ. ನಷ್ಟ ಉಂಟಾಗಿದೆ.

ಹಿರೇಮರಳಿ ಗ್ರಾಮದಿಂದ ಚಿಕ್ಕಮರಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವಂತಹ ಆಲೆಮನೆಯ ಬಳಿ ರಾಜೇಶ್ ಅವರು ಕರು ಹಾಗೂ ಮೇಕೆಯನ್ನು ಕಟ್ಟುಹಾಕಿದ್ದರು. ಆಲೆಮನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಮಾಲೀಕರು ರೂಂ ಒಳಗಡೆ ಮಲಗಿದ್ದ ಸಂದರ್ಭದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುಗಳು ಹಾಗೂ ಮೇಕೆಯ ಮೇಲೆ ದಾಳಿ ನಡೆಸಿ ಕರುಗಳನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿದೆ.

ಮಾಲೀಕರು ಸೋಮವಾರ ಬೆಳಿಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕರುವನ್ನು ಆಲೆಮನೆಯ ಬಳಿಯೇ ಬಿಸಾಡಿದ್ದು ಮತ್ತೊಂದು ಕರುವನ್ನು ಕಬ್ಬಿನ ಗದ್ದೆಯ ಬಳಿ ಬಿಸಾಡಿ ಹೋಗಿದೆ. ಮೇಕೆಯನ್ನು ಎಳೆದುಕೊಂಡು ಹೋಗಿದ್ದು ಸಾವಿರಾರು ರೂ. ನಷ್ಟ ಉಂಟಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಲ್ಲಿ ಮೃತಪಟ್ಟ ಕರುಗಳ ಶವಪರೀಕ್ಷೆ ನಡೆಸಿದರು. ಬಳಿಕ ಸರ್ಕಾರದಿಂದ ದೊರೆಯುವ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಸಾರ್ವಜನಿಕರು ಆತಂಕ
ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸುತ್ತಮುತ್ತಲಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಽಕಾರಿಗಳು ಚಿರತೆಗಳ ಸೆರೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

9 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

9 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

10 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

11 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

12 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

12 hours ago