Leopard kills goat and cow in barn
ಪಾಂಡವಪುರ : ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ರೈತರಾದ ಕೃಷ್ಣೇಗೌಡ, ಚಂದ್ರಶೇಖರ್ ಎಂಬವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ಚಿರತೆ ದಾಳಿ ನಡೆಸಿ ಹಸು, ಕರು ಹಾಗೂ ಎರಡು ಮೇಕೆಗಳನ್ನು ಕೊಂದಿದೆ.
ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸು ಮತ್ತು ಕರು, ಮೇಕೆಯ ಕುತ್ತಿಗೆ ಭಾಗವನ್ನು ಹಿಡಿದು ಕೊಂದಿದೆ. ಹಸುವಿನ ಕರುವನ್ನು ಕೊಟ್ಟಿಗೆಯಿಂದ ಹೊರಗಡೆ ಎಳೆದುಕೊಂಡು ಹೋಗಿದೆ. ಹಸು, ಕರುಗಳು ಕಿರುಚಾಟವನ್ನು ಕೇಳಿ ಮನೆಯವರು ಹೊರಬರುತ್ತಿದ್ದಂತೆಯೇ ಚಿರತೆ ಸ್ಥಳದಿಂದ ಪರಾರಿಯಾಗಿದೆ. ಘಟನೆಯಿಂದ ರೈತರಾದ ಕೃಷ್ಣೇಗೌಡ ಮತ್ತು ಚಂದ್ರಶೇಖರ್ ಎಂಬವರಿಗೆ ಸಾವಿರಾರು ರೂ.ನಷ್ಟ ಉಂಟಾಗಿದೆ. ಸಂಬಂಧಿಸಿದ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಳಿಕ ಪಶು ವೈದ್ಯರಿಂದ ಶವಪರೀಕ್ಷೆ ನಡೆಸಿ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
ಚಿರತೆ ಸೆರೆ ಹಿಡಿಯಲು ಈಗಾಗಲೆ ದೇವೇಗೌಡನಕೊಪ್ಪಲಿನಿಂದ ಹರಳಹಳ್ಳಿಗೆ ಹೋಗುವ ಬೋರೆಯಲ್ಲಿ ಬೋನ್ ಇಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಕುಮಾರ್ ತಿಳಿಸಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…