Leopard kills goat and cow in barn
ಪಾಂಡವಪುರ : ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ರೈತರಾದ ಕೃಷ್ಣೇಗೌಡ, ಚಂದ್ರಶೇಖರ್ ಎಂಬವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ಚಿರತೆ ದಾಳಿ ನಡೆಸಿ ಹಸು, ಕರು ಹಾಗೂ ಎರಡು ಮೇಕೆಗಳನ್ನು ಕೊಂದಿದೆ.
ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸು ಮತ್ತು ಕರು, ಮೇಕೆಯ ಕುತ್ತಿಗೆ ಭಾಗವನ್ನು ಹಿಡಿದು ಕೊಂದಿದೆ. ಹಸುವಿನ ಕರುವನ್ನು ಕೊಟ್ಟಿಗೆಯಿಂದ ಹೊರಗಡೆ ಎಳೆದುಕೊಂಡು ಹೋಗಿದೆ. ಹಸು, ಕರುಗಳು ಕಿರುಚಾಟವನ್ನು ಕೇಳಿ ಮನೆಯವರು ಹೊರಬರುತ್ತಿದ್ದಂತೆಯೇ ಚಿರತೆ ಸ್ಥಳದಿಂದ ಪರಾರಿಯಾಗಿದೆ. ಘಟನೆಯಿಂದ ರೈತರಾದ ಕೃಷ್ಣೇಗೌಡ ಮತ್ತು ಚಂದ್ರಶೇಖರ್ ಎಂಬವರಿಗೆ ಸಾವಿರಾರು ರೂ.ನಷ್ಟ ಉಂಟಾಗಿದೆ. ಸಂಬಂಧಿಸಿದ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಳಿಕ ಪಶು ವೈದ್ಯರಿಂದ ಶವಪರೀಕ್ಷೆ ನಡೆಸಿ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
ಚಿರತೆ ಸೆರೆ ಹಿಡಿಯಲು ಈಗಾಗಲೆ ದೇವೇಗೌಡನಕೊಪ್ಪಲಿನಿಂದ ಹರಳಹಳ್ಳಿಗೆ ಹೋಗುವ ಬೋರೆಯಲ್ಲಿ ಬೋನ್ ಇಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಕುಮಾರ್ ತಿಳಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…