Leopard kills goat and cow in barn
ಪಾಂಡವಪುರ : ತಾಲ್ಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ರೈತರಾದ ಕೃಷ್ಣೇಗೌಡ, ಚಂದ್ರಶೇಖರ್ ಎಂಬವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ಚಿರತೆ ದಾಳಿ ನಡೆಸಿ ಹಸು, ಕರು ಹಾಗೂ ಎರಡು ಮೇಕೆಗಳನ್ನು ಕೊಂದಿದೆ.
ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸು ಮತ್ತು ಕರು, ಮೇಕೆಯ ಕುತ್ತಿಗೆ ಭಾಗವನ್ನು ಹಿಡಿದು ಕೊಂದಿದೆ. ಹಸುವಿನ ಕರುವನ್ನು ಕೊಟ್ಟಿಗೆಯಿಂದ ಹೊರಗಡೆ ಎಳೆದುಕೊಂಡು ಹೋಗಿದೆ. ಹಸು, ಕರುಗಳು ಕಿರುಚಾಟವನ್ನು ಕೇಳಿ ಮನೆಯವರು ಹೊರಬರುತ್ತಿದ್ದಂತೆಯೇ ಚಿರತೆ ಸ್ಥಳದಿಂದ ಪರಾರಿಯಾಗಿದೆ. ಘಟನೆಯಿಂದ ರೈತರಾದ ಕೃಷ್ಣೇಗೌಡ ಮತ್ತು ಚಂದ್ರಶೇಖರ್ ಎಂಬವರಿಗೆ ಸಾವಿರಾರು ರೂ.ನಷ್ಟ ಉಂಟಾಗಿದೆ. ಸಂಬಂಧಿಸಿದ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಳಿಕ ಪಶು ವೈದ್ಯರಿಂದ ಶವಪರೀಕ್ಷೆ ನಡೆಸಿ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
ಚಿರತೆ ಸೆರೆ ಹಿಡಿಯಲು ಈಗಾಗಲೆ ದೇವೇಗೌಡನಕೊಪ್ಪಲಿನಿಂದ ಹರಳಹಳ್ಳಿಗೆ ಹೋಗುವ ಬೋರೆಯಲ್ಲಿ ಬೋನ್ ಇಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಕುಮಾರ್ ತಿಳಿಸಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…