ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಕಿಕ್ಕೇರಿ ಹೋಬಳಿಯ ಗೊಲ್ಲರಕೊಪ್ಪಲು ಗ್ರಾಮದ ದಿನೇಶ್ ಅವರ ಜಮೀನಿನ ಬಳಿ ತಾಲ್ಲೂಕು ವಲಯ ಅರಣ್ಯ ಇಲಾಖೆ ಸುಮಾರು ಒಂದು ವಾರದ ಹಿಂದೆ ಚಿರತೆ ಸೆರೆಗೆ ಬೋನು ಅಳವಡಿಸಿತ್ತು. ಭಾನುವಾರ ತಡರಾತ್ರಿ ಆಹಾರ ಅರಸಿ ಬಂದ ಸುಮಾರು ಐದು ವರ್ಷ ಪ್ರಾಯದ ಗಂಡು ಚಿರತೆ, ಬೋನಿನಲ್ಲಿ ಕಟ್ಟಿದ್ದ ನಾಯಿಯನ್ನು ಹಿಡಿಯಲು ಯತ್ನಿಸಿದ ವೇಳೆ ಬೋನಿನೊಳಗೆ ಸೆರೆಯಾಗಿದೆ.
ಕಳೆದ ಹಲವು ವಾರಗಳಿಂದ ಈ ಚಿರತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾನುವಾರುಗಳ ಕೊಟ್ಟಿಗೆಗಳಿಗೆ ನುಗ್ಗಿ ಸಾಕಷ್ಟು ಜಾನುವಾರುಗಳನ್ನು ಬೇಟೆಯಾಡಿತ್ತು. ಇದರಿಂದ ರೈತರು ರಾತ್ರಿ ವೇಳೆಯಲ್ಲಿ ಜಮೀನುಗಳಿಗೆ ತೆರಳಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಹಾಗೂ ರೈತರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದರಂತೆ ಅಧಿಕಾರಿಗಳು ಬೋನು ಅಳವಡಿಸಿ ಚಿರತೆಯ ಚಲನವಲನವನ್ನು ನಿರಂತರವಾಗಿ ಗಮನಿಸುತ್ತಿದ್ದರು.
ಚಿರತೆ ಬೋನಿಗೆ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಚಿರತೆಯನ್ನು ವೀಕ್ಷಿಸಿದರು.
ಪಶುವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಚಿರತೆಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿ ದ್ದಾರೆ. ಮೇಲಽಕಾರಿಗಳ ಆದೇಶದಂತೆ ಚಿರತೆಯನ್ನು ಬಂಡೀಪುರ ಅಥವಾ ನಾಗರಹೊಳೆ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ಅನಿತಾ, ಉಪ ವಲಯ ಅರಣ್ಯಾಧಿಕಾರಿ ಚೇತನ್, ಅರಣ್ಯ ರಕ್ಷಕಿ ಅಭಿ, ಸಿಬ್ಬಂದಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಚಿರತೆ ಕಾರ್ಯಪಡೆ ಸಿಬ್ಬಂದಿ ಭಾಗವಹಿಸಿದ್ದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…