ಮಂಡ್ಯ

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಿಕ್ಕೇರಿ ಹೋಬಳಿಯ ಗೊಲ್ಲರಕೊಪ್ಪಲು ಗ್ರಾಮದ ದಿನೇಶ್ ಅವರ ಜಮೀನಿನ ಬಳಿ ತಾಲ್ಲೂಕು ವಲಯ ಅರಣ್ಯ ಇಲಾಖೆ ಸುಮಾರು ಒಂದು ವಾರದ ಹಿಂದೆ ಚಿರತೆ ಸೆರೆಗೆ ಬೋನು ಅಳವಡಿಸಿತ್ತು. ಭಾನುವಾರ ತಡರಾತ್ರಿ ಆಹಾರ ಅರಸಿ ಬಂದ ಸುಮಾರು ಐದು ವರ್ಷ ಪ್ರಾಯದ ಗಂಡು ಚಿರತೆ, ಬೋನಿನಲ್ಲಿ ಕಟ್ಟಿದ್ದ ನಾಯಿಯನ್ನು ಹಿಡಿಯಲು ಯತ್ನಿಸಿದ ವೇಳೆ ಬೋನಿನೊಳಗೆ ಸೆರೆಯಾಗಿದೆ.

ಕಳೆದ ಹಲವು ವಾರಗಳಿಂದ ಈ ಚಿರತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾನುವಾರುಗಳ ಕೊಟ್ಟಿಗೆಗಳಿಗೆ ನುಗ್ಗಿ ಸಾಕಷ್ಟು ಜಾನುವಾರುಗಳನ್ನು ಬೇಟೆಯಾಡಿತ್ತು. ಇದರಿಂದ ರೈತರು ರಾತ್ರಿ ವೇಳೆಯಲ್ಲಿ ಜಮೀನುಗಳಿಗೆ ತೆರಳಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಹಾಗೂ ರೈತರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದರಂತೆ ಅಧಿಕಾರಿಗಳು ಬೋನು ಅಳವಡಿಸಿ ಚಿರತೆಯ ಚಲನವಲನವನ್ನು ನಿರಂತರವಾಗಿ ಗಮನಿಸುತ್ತಿದ್ದರು.

ಚಿರತೆ ಬೋನಿಗೆ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಚಿರತೆಯನ್ನು ವೀಕ್ಷಿಸಿದರು.

ಪಶುವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಚಿರತೆಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿ ದ್ದಾರೆ. ಮೇಲಽಕಾರಿಗಳ ಆದೇಶದಂತೆ ಚಿರತೆಯನ್ನು ಬಂಡೀಪುರ ಅಥವಾ ನಾಗರಹೊಳೆ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ಅನಿತಾ, ಉಪ ವಲಯ ಅರಣ್ಯಾಧಿಕಾರಿ ಚೇತನ್, ಅರಣ್ಯ ರಕ್ಷಕಿ ಅಭಿ, ಸಿಬ್ಬಂದಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಚಿರತೆ ಕಾರ್ಯಪಡೆ ಸಿಬ್ಬಂದಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

19 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

19 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

19 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

19 hours ago