ಮಂಡ್ಯ: ರಾಜ್ಯದ ಬಿಜೆಪಿ ಸಂಸದರು, ಕೆಆರ್’ಎಸ್ ವೀಕ್ಷಣೆ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಲಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿರುಗೇಟು ನೀಡಿದರು.
ಮದ್ದೂರು ತಾಲೂಕಿನ ಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ 25 ಸಂಸದರು ಎಲ್ಲಿ ಹೋದರು ? ಅಧಿಕಾರದಿಂದ ಕೆಳಗಿಳಿಯುವುದಕ್ಕೆ 4 ತಿಂಗಳು ಬಾಕಿ ಇರುವಾಗ ಇವರಿಗೆ ರೈತರ ಬಗ್ಗೆ ಕಾಳಜಿ ಬಂದಿದೆಯೇ? ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಅರ್ಜಿ ಹಾಕಿ ವಾಸ್ತವ ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಹೋರಾಟ ಮಾಡುತ್ತಿದ್ದೇವೆ, ಕುಡಿಯುವ ನೀರು ಉಳಿಸಿಕೊಳ್ಳಲು ಸತತ ಪ್ರಯತ್ನ ಮಾಡುತ್ತಿದ್ದೇವೆ, ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು,
ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು. ದೆಹಲಿಗೆ ಹೋಗಿ ಮಾಡಬೇಕು, ಅದು ಸರ್ಕಾರದ ಕರ್ತವ್ಯ, ಖಂಡಿತ ಮಾಡುತ್ತೇವೆ, ಈ ಮದ್ಯೆ ಬಿಜೆಪಿ ಪಕ್ಷದವರು ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು ಬಿಟ್ಟು, ದೆಹಲಿಗೆ ಹೋಗಿ ಪ್ರಧಾನಮಂತ್ರಿಗೆ ಒತ್ತಡ ಹಾಕುವುದು ಒಳ್ಳೆಯದು, ಕಾವೇರಿ ವಿಚಾರದಲ್ಲಿ ಅವರು ರಾಜಕಾರಣ ಮಾಡುವುದು ಬೇಡ ಎಂದರು.
ಲೋಕಸಭಾ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡರೆ, ನಾವು ಸಮರ್ಥವಾಗಿ ಚುನಾವಣೆ ಎದುರಿಸುತ್ತೇವೆ ಪ್ರತಿಕ್ರಿಯಿಸಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…