ಮಂಡ್ಯ

ಬಿಜೆಪಿ ಸಂಸದರು ಕೆಆರ್‌ಎಸ್‌ ವೀಕ್ಷಣೆ ಬಿಟ್ಟು ಕೇಂದ್ರದ ಮೇಲೆ ಒತ್ತಡ ಹೇರಲಿ: ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದ ಬಿಜೆಪಿ ಸಂಸದರು, ಕೆಆರ್’ಎಸ್ ವೀಕ್ಷಣೆ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಲಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿರುಗೇಟು ನೀಡಿದರು.

ಮದ್ದೂರು ತಾಲೂಕಿನ ಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ 25 ಸಂಸದರು ಎಲ್ಲಿ ಹೋದರು ? ಅಧಿಕಾರದಿಂದ ಕೆಳಗಿಳಿಯುವುದಕ್ಕೆ 4 ತಿಂಗಳು ಬಾಕಿ ಇರುವಾಗ ಇವರಿಗೆ ರೈತರ ಬಗ್ಗೆ ಕಾಳಜಿ ಬಂದಿದೆಯೇ? ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಅರ್ಜಿ ಹಾಕಿ ವಾಸ್ತವ ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಹೋರಾಟ ಮಾಡುತ್ತಿದ್ದೇವೆ, ಕುಡಿಯುವ ನೀರು ಉಳಿಸಿಕೊಳ್ಳಲು ಸತತ ಪ್ರಯತ್ನ ಮಾಡುತ್ತಿದ್ದೇವೆ, ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು,

ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು. ದೆಹಲಿಗೆ ಹೋಗಿ ಮಾಡಬೇಕು, ಅದು ಸರ್ಕಾರದ ಕರ್ತವ್ಯ, ಖಂಡಿತ ಮಾಡುತ್ತೇವೆ, ಈ ಮದ್ಯೆ ಬಿಜೆಪಿ ಪಕ್ಷದವರು ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು ಬಿಟ್ಟು, ದೆಹಲಿಗೆ ಹೋಗಿ ಪ್ರಧಾನಮಂತ್ರಿಗೆ ಒತ್ತಡ ಹಾಕುವುದು ಒಳ್ಳೆಯದು, ಕಾವೇರಿ ವಿಚಾರದಲ್ಲಿ ಅವರು ರಾಜಕಾರಣ ಮಾಡುವುದು ಬೇಡ ಎಂದರು.

ಲೋಕಸಭಾ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡರೆ, ನಾವು ಸಮರ್ಥವಾಗಿ ಚುನಾವಣೆ ಎದುರಿಸುತ್ತೇವೆ ಪ್ರತಿಕ್ರಿಯಿಸಿದರು.

andolanait

Recent Posts

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

4 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

16 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

1 hour ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

1 hour ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

1 hour ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

2 hours ago