ಮಂಡ್ಯ

ಬಿಜೆಪಿ ಸಂಸದರು ಕೆಆರ್‌ಎಸ್‌ ವೀಕ್ಷಣೆ ಬಿಟ್ಟು ಕೇಂದ್ರದ ಮೇಲೆ ಒತ್ತಡ ಹೇರಲಿ: ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದ ಬಿಜೆಪಿ ಸಂಸದರು, ಕೆಆರ್’ಎಸ್ ವೀಕ್ಷಣೆ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಲಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿರುಗೇಟು ನೀಡಿದರು.

ಮದ್ದೂರು ತಾಲೂಕಿನ ಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ 25 ಸಂಸದರು ಎಲ್ಲಿ ಹೋದರು ? ಅಧಿಕಾರದಿಂದ ಕೆಳಗಿಳಿಯುವುದಕ್ಕೆ 4 ತಿಂಗಳು ಬಾಕಿ ಇರುವಾಗ ಇವರಿಗೆ ರೈತರ ಬಗ್ಗೆ ಕಾಳಜಿ ಬಂದಿದೆಯೇ? ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಅರ್ಜಿ ಹಾಕಿ ವಾಸ್ತವ ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಹೋರಾಟ ಮಾಡುತ್ತಿದ್ದೇವೆ, ಕುಡಿಯುವ ನೀರು ಉಳಿಸಿಕೊಳ್ಳಲು ಸತತ ಪ್ರಯತ್ನ ಮಾಡುತ್ತಿದ್ದೇವೆ, ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು,

ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು. ದೆಹಲಿಗೆ ಹೋಗಿ ಮಾಡಬೇಕು, ಅದು ಸರ್ಕಾರದ ಕರ್ತವ್ಯ, ಖಂಡಿತ ಮಾಡುತ್ತೇವೆ, ಈ ಮದ್ಯೆ ಬಿಜೆಪಿ ಪಕ್ಷದವರು ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು ಬಿಟ್ಟು, ದೆಹಲಿಗೆ ಹೋಗಿ ಪ್ರಧಾನಮಂತ್ರಿಗೆ ಒತ್ತಡ ಹಾಕುವುದು ಒಳ್ಳೆಯದು, ಕಾವೇರಿ ವಿಚಾರದಲ್ಲಿ ಅವರು ರಾಜಕಾರಣ ಮಾಡುವುದು ಬೇಡ ಎಂದರು.

ಲೋಕಸಭಾ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡರೆ, ನಾವು ಸಮರ್ಥವಾಗಿ ಚುನಾವಣೆ ಎದುರಿಸುತ್ತೇವೆ ಪ್ರತಿಕ್ರಿಯಿಸಿದರು.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

3 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

3 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

3 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

4 hours ago