ಮಂಡ್ಯ: ರಾಜ್ಯದ ಬಿಜೆಪಿ ಸಂಸದರು, ಕೆಆರ್’ಎಸ್ ವೀಕ್ಷಣೆ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಲಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿರುಗೇಟು ನೀಡಿದರು.
ಮದ್ದೂರು ತಾಲೂಕಿನ ಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ 25 ಸಂಸದರು ಎಲ್ಲಿ ಹೋದರು ? ಅಧಿಕಾರದಿಂದ ಕೆಳಗಿಳಿಯುವುದಕ್ಕೆ 4 ತಿಂಗಳು ಬಾಕಿ ಇರುವಾಗ ಇವರಿಗೆ ರೈತರ ಬಗ್ಗೆ ಕಾಳಜಿ ಬಂದಿದೆಯೇ? ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಅರ್ಜಿ ಹಾಕಿ ವಾಸ್ತವ ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಹೋರಾಟ ಮಾಡುತ್ತಿದ್ದೇವೆ, ಕುಡಿಯುವ ನೀರು ಉಳಿಸಿಕೊಳ್ಳಲು ಸತತ ಪ್ರಯತ್ನ ಮಾಡುತ್ತಿದ್ದೇವೆ, ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು,
ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು. ದೆಹಲಿಗೆ ಹೋಗಿ ಮಾಡಬೇಕು, ಅದು ಸರ್ಕಾರದ ಕರ್ತವ್ಯ, ಖಂಡಿತ ಮಾಡುತ್ತೇವೆ, ಈ ಮದ್ಯೆ ಬಿಜೆಪಿ ಪಕ್ಷದವರು ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
ಬಿಜೆಪಿ ಸಂಸದರು ಕೃಷ್ಣರಾಜಸಾಗರ ವೀಕ್ಷಣೆ ಮಾಡೋದು ಬಿಟ್ಟು, ದೆಹಲಿಗೆ ಹೋಗಿ ಪ್ರಧಾನಮಂತ್ರಿಗೆ ಒತ್ತಡ ಹಾಕುವುದು ಒಳ್ಳೆಯದು, ಕಾವೇರಿ ವಿಚಾರದಲ್ಲಿ ಅವರು ರಾಜಕಾರಣ ಮಾಡುವುದು ಬೇಡ ಎಂದರು.
ಲೋಕಸಭಾ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡರೆ, ನಾವು ಸಮರ್ಥವಾಗಿ ಚುನಾವಣೆ ಎದುರಿಸುತ್ತೇವೆ ಪ್ರತಿಕ್ರಿಯಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…