ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು.
ಅವರ ಇಂದು(ಜೂನ್.5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ , ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ, ನಗರಸಭೆ, ರೋಟರಿ ಮಂಡ್ಯ, ಇವರ ವತಿಯಿಂದ ಜಿಲ್ಲಾ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟಿ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮನ್ನ ನಾವು ರಕ್ಷಣೆ ಮಾಡಿಕೊಳ್ಳುವ ಸಮಯ ದೂರವಿಲ್ಲ, ಹಲವು ವರ್ಷಗಳಿಂದಲೇ ನೀರುಗಲ್ಲುಗಳು ಕರಗಿ ಕಡಲ ತೀರಗಳು ಮುಳುಗುತ್ತವೆ ಎಂಬುದನ್ನು ತಜ್ಞರು ಹೇಳಿದ್ದಾರೆ, ಅದರಂತೆ ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಹಾಗಾಗಿ ಪ್ರಕೃತಿಯನ್ನು ರಕ್ಷಣೆ ಮಾಡುವುದು ಮುಖ್ಯವಾಗಬೇಕು. ಆ ಮೂಲಕ ಒಂದು ಸಸಿನೆಟ್ಟು ಪೋಷಣೆ ಮಾಡುವ ಮನೋಭಾವ ಹೆಚ್ಚಾಗಲಿ ಎಂದು ಸಲಹೆ ನೀಡಿದರು.
ವಿಶ್ವ ಪರಿಸರ ದಿನದಂದು ಮಾತ್ರ ಪರಿಸರ ಸಂರಕ್ಷಣೆ ಮಾಡದೆ ಪ್ರತಿದಿನವೂ ಕೂಡ ಪರಿಸರ ಸಂರಕ್ಷಿಸುವ ಕೆಲಸ ಆಗಬೇಕು ನಮ್ಮ ಮನೆಯ ಅಂಗಳದಲ್ಲಿ ಗಿಡಗಳನ್ನು ನೆಟ್ಟಿ ಪ್ರಕೃತಿಯನ್ನು ಉಳಿಸೋಣ ಎಂದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಅಗ್ನಿಶಾಮಕ ದಳದ ಕಚೇರಿಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಂಜುಳ ಇಟ್ಟಿ, ದಿಲೀಪ್ ಕುಮಾರ್ ಬಿ ಸಂದೀಪ್ ಸಾಲಿಯಾನ ಕೆ ಲಕ್ಷ್ಮಿ ಯೋಗೇಶ್ವರ ಪೂಜಾ ಶೆಟ್ಟಿ ಎರಡನೇ ಸಿವಿಲ್ ನ್ಯಾಯಾಧೀಶರಾದ ಶಂಕರ ವಜ್ರೇಶ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಆನಂದ್ ರೋಟರಿ ಅಧ್ಯಕ್ಷ ಬಿಎಸ್ ಅನುಪಮಾ ಕಾರ್ಯದರ್ಶಿ ರಾಜೇಶ್ ಭಾಗವಹಿಸಿದ್ದರು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…