ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು.
ಅವರ ಇಂದು(ಜೂನ್.5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ , ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ, ನಗರಸಭೆ, ರೋಟರಿ ಮಂಡ್ಯ, ಇವರ ವತಿಯಿಂದ ಜಿಲ್ಲಾ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟಿ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮನ್ನ ನಾವು ರಕ್ಷಣೆ ಮಾಡಿಕೊಳ್ಳುವ ಸಮಯ ದೂರವಿಲ್ಲ, ಹಲವು ವರ್ಷಗಳಿಂದಲೇ ನೀರುಗಲ್ಲುಗಳು ಕರಗಿ ಕಡಲ ತೀರಗಳು ಮುಳುಗುತ್ತವೆ ಎಂಬುದನ್ನು ತಜ್ಞರು ಹೇಳಿದ್ದಾರೆ, ಅದರಂತೆ ಆ ಪ್ರಕ್ರಿಯೆ ಪ್ರಾರಂಭವಾಗಿದೆ. ಹಾಗಾಗಿ ಪ್ರಕೃತಿಯನ್ನು ರಕ್ಷಣೆ ಮಾಡುವುದು ಮುಖ್ಯವಾಗಬೇಕು. ಆ ಮೂಲಕ ಒಂದು ಸಸಿನೆಟ್ಟು ಪೋಷಣೆ ಮಾಡುವ ಮನೋಭಾವ ಹೆಚ್ಚಾಗಲಿ ಎಂದು ಸಲಹೆ ನೀಡಿದರು.
ವಿಶ್ವ ಪರಿಸರ ದಿನದಂದು ಮಾತ್ರ ಪರಿಸರ ಸಂರಕ್ಷಣೆ ಮಾಡದೆ ಪ್ರತಿದಿನವೂ ಕೂಡ ಪರಿಸರ ಸಂರಕ್ಷಿಸುವ ಕೆಲಸ ಆಗಬೇಕು ನಮ್ಮ ಮನೆಯ ಅಂಗಳದಲ್ಲಿ ಗಿಡಗಳನ್ನು ನೆಟ್ಟಿ ಪ್ರಕೃತಿಯನ್ನು ಉಳಿಸೋಣ ಎಂದರು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಅಗ್ನಿಶಾಮಕ ದಳದ ಕಚೇರಿಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಂಜುಳ ಇಟ್ಟಿ, ದಿಲೀಪ್ ಕುಮಾರ್ ಬಿ ಸಂದೀಪ್ ಸಾಲಿಯಾನ ಕೆ ಲಕ್ಷ್ಮಿ ಯೋಗೇಶ್ವರ ಪೂಜಾ ಶೆಟ್ಟಿ ಎರಡನೇ ಸಿವಿಲ್ ನ್ಯಾಯಾಧೀಶರಾದ ಶಂಕರ ವಜ್ರೇಶ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಆನಂದ್ ರೋಟರಿ ಅಧ್ಯಕ್ಷ ಬಿಎಸ್ ಅನುಪಮಾ ಕಾರ್ಯದರ್ಶಿ ರಾಜೇಶ್ ಭಾಗವಹಿಸಿದ್ದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…