ಮಂಡ್ಯ: ರಾಜ್ಯ ಸರ್ಕಾರದ ಯೋಜನೆಯಾದ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.
ಸೋಮವಾರ ಅವರು ಕೆಆರ್ಎಸ್ ಅಣೆಕಟ್ಟೆಗೆ ಬಾಗಿನ ಅರ್ಪಿಸಿ ಮಾತನಾಡಿ, ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಈ ಅಣೆಕಟ್ಟೆಯಿಂದ 65 ಟಿಎಂಸಿ ನೀರು ಸಂಗ್ರಹ ಮಾಡಬಹುದಾಗಿದೆ. ಜತೆಗೆ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಬೆಂಗಳೂರಿಗೆ ನೀರು ಒದಗಿಸಲು ಸಹ ಸಾಧ್ಯವಾಗುತ್ತದೆ. ಮಳೆ ಕಡಿಮೆಯಾದ ಸಂಕಷ್ಟದ ವರ್ಷದಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗಲಿದೆ ಎಂದರು.
ರಾಜ್ಯದ ವಿಪಕ್ಷ ನಾಯಕರುಗಳು ಅನ್ಯಾಯದ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯಕ್ಕೆ ನಯಾಪೈಸಿ ಬಂದಿಲ್ಲ. ಬಿಜೆಪಿ-ಜೆಡಿಎಸ್ ಸಂಸದರೂ ಈ ಬಗ್ಗೆ ಯಾವತ್ತು ಧ್ವನಿಯೆತ್ತಿಲ್ಲ, ಬರಿ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುವ ಮೂಲಕ ರಾಜ್ಯದ ಜನರನ್ನು ದಿಕ್ಕುತಪ್ಪಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…