ಮಂಡ್ಯ: ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ . ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸಚಿವರು ಸವಾಲು ಹಾಕಿದರು.
ನನ್ನ ಬಗ್ಗೆ ಮಾತನಾಡುವ ಅಸಾಮಿಯ ಬಗ್ಗೆ ಚರ್ಚೆ ಮಾಡಲು ಬಹಳಷ್ಟು ವಿಚಾರಗಳು ಇವೆ. ಪಾಪ ನಮ್ಮನ್ನು ಕೆದಕಿದ್ದಾರೆ. ನಿನ್ನೆಯ ದಿನ ಅಸಲಿ ನಕಲಿ ಎಂದು ಹೇಳಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಸತ್ತರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿ ನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು. ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇದೀಯಾ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಂತ್ರಿಗಳ ಲೇಟರ್ ಪ್ಯಾಡ್ ನಲ್ಲಿ ಈ ಜನ ಏನೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ಇದೆ. ಮೂಡಾ ದಾಖಲೆಗಳಲ್ಲಿ ಸಹಿ ವ್ಯತ್ಯಾಸ ಜನ ಮಾತನಾಡುತ್ತಿದ್ದಾರೆ. ಈ ಹಗರಣದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ. ಅದು ಸರ್ಕಾರಿ ಭೂಮಿ. ಸರ್ಕಾರಿ ಭೂಮಿ ಲಪಟಾಯಿಸಿ ಮೂಡಾ ಸೈಟ್ ಪಡೆದಿದ್ದಾರೆ. ಇದಕ್ಕೆ ಉತ್ತರ ಕೊಡಲಿ ಎಂದು ಅವರು ಒತ್ತಾಯ ಮಾಡಿದರು.
ಕಾನೂನು ಪ್ರಕಾರ ಎಷ್ಟು ಸೈಟ್ ಬೇಕಾದರೂ ಪಡೆಯಿರಿ. ಇದಕ್ಕೆ ನಮ್ಮ ವಿರೋಧವಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿ, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಇಂಥ ಕೆಲಸ ಮಾಡಿದ್ದಾರೆ. ಸಾಮಾನ್ಯ ರೈತನೊಬ್ಬ ಬಂದು ಜಮೀನು ಖಾತೆ ಮಾಡಲು ಹೇಳಿದರೆ ಮಾಡಿಕೊಡುತ್ತಾರಾ? ಭೂ ಪರಿವರ್ತನೆ ಮಾಡಿದ್ದೀರಿ ಅಲ್ಲವೇ? ಅದು ಯಾರ ಭೂಮಿ?
ಆ ವ್ಯಕ್ತಿ ಸತ್ತು 25 ವರ್ಷವಾಗಿದೆ. ಸತ್ತಿರುವ ವ್ಯಕ್ತಿಯ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಸತ್ತಿರುವ ಲಿಂಗನ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿಸಿದ್ದು ಯಾರು? ಎಂದು ಸಚಿವರು ಪ್ರಶ್ನಿಸಿದರು.
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…