ಮಂಡ್ಯ

ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ: ʻಎಚ್‌ಡಿಕೆʼ ವ್ಯಂಗ್ಯ

ಮಂಡ್ಯ: ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ . ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ ಎಂದು ಸಚಿವರು ಸವಾಲು ಹಾಕಿದರು.

ನನ್ನ ಬಗ್ಗೆ ಮಾತನಾಡುವ ಅಸಾಮಿಯ ಬಗ್ಗೆ ಚರ್ಚೆ ಮಾಡಲು ಬಹಳಷ್ಟು ವಿಚಾರಗಳು ಇವೆ. ಪಾಪ ನಮ್ಮನ್ನು ಕೆದಕಿದ್ದಾರೆ. ನಿನ್ನೆಯ ದಿನ ಅಸಲಿ ನಕಲಿ ಎಂದು ಹೇಳಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಸತ್ತರ ಹೆಸರಲ್ಲಿ ಭೂಮಿ ಖರೀದಿ ಮಾಡಿದ್ದಾರೆ. ಡಿ ನೋಟಿಫಿಷನ್ ಮಾಡಿಕೊಂಡು ಜೀವನ ಮಾಡುವವರು ಇವರು. ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇದೀಯಾ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಂತ್ರಿಗಳ ಲೇಟರ್ ಪ್ಯಾಡ್ ನಲ್ಲಿ ಈ ಜನ ಏನೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ಇದೆ. ಮೂಡಾ ದಾಖಲೆಗಳಲ್ಲಿ ಸಹಿ ವ್ಯತ್ಯಾಸ ಜನ ಮಾತನಾಡುತ್ತಿದ್ದಾರೆ. ಈ ಹಗರಣದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ. ಅದು ಸರ್ಕಾರಿ ಭೂಮಿ. ಸರ್ಕಾರಿ ಭೂಮಿ ಲಪಟಾಯಿಸಿ ಮೂಡಾ ಸೈಟ್ ಪಡೆದಿದ್ದಾರೆ. ಇದಕ್ಕೆ ಉತ್ತರ ಕೊಡಲಿ ಎಂದು ಅವರು ಒತ್ತಾಯ ಮಾಡಿದರು.

ಕಾನೂನು ಪ್ರಕಾರ ಎಷ್ಟು ಸೈಟ್ ಬೇಕಾದರೂ ಪಡೆಯಿರಿ. ಇದಕ್ಕೆ ನಮ್ಮ ವಿರೋಧವಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿ, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಇಂಥ ಕೆಲಸ ಮಾಡಿದ್ದಾರೆ. ಸಾಮಾನ್ಯ ರೈತನೊಬ್ಬ ಬಂದು ಜಮೀನು ಖಾತೆ ಮಾಡಲು ಹೇಳಿದರೆ ಮಾಡಿಕೊಡುತ್ತಾರಾ? ಭೂ ಪರಿವರ್ತನೆ ಮಾಡಿದ್ದೀರಿ ಅಲ್ಲವೇ? ಅದು ಯಾರ ಭೂಮಿ?
ಆ ವ್ಯಕ್ತಿ ಸತ್ತು 25 ವರ್ಷವಾಗಿದೆ. ಸತ್ತಿರುವ ವ್ಯಕ್ತಿಯ ಹೆಸರಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಸತ್ತಿರುವ ಲಿಂಗನ ಹೆಸರಲ್ಲಿ ಡಿನೋಟಿಫಿಕೇಷನ್ ‌ಮಾಡಿಸಿದ್ದು ಯಾರು? ಎಂದು ಸಚಿವರು ಪ್ರಶ್ನಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago