ಮಂಡ್ಯ

ಸರ್ಕಾರದ ಯೋಜನೆಗಳು ಜನರಿಗೆ ಸದುಪಯೋಗವಾಗಲಿ : ಶಾಸಕ ‌ ಪಿ.ರವಿಕುಮಾರ್

ಮಂಡ್ಯ: ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲೆಗೆ ಒದಗಿಸುವುದು ಜನತಾ ದರ್ಶನದ ಉದ್ದೇಶವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಇಂದು ಹಳೇ ಬೂದನೂರು ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಈ ಹಿಂದೆ ಬಸರಾಳು, ಕೆರಗೋಡು ಹೋಬಳಿ ಮಟ್ಟದಲ್ಲಿ ಜನತಾ ದರ್ಶನ ಆಯೋಜಿಸಲಾಗುತ್ತಿತ್ತು, ಸುಮಾರು 5000 ಜನರು ಭಾಗವಹಿಸಿ ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸುತ್ತಿದ್ದರೂ, ಸ್ವೀಕೃತವಾದ ಅರ್ಜಿಗಳನ್ನು ಒಂದು ತಿಂಗಳು ಕಾಲಮಿತಿಯೊಳಗೆ ಪರಿಹರಿಸಲಾಗುತ್ತಿತ್ತು. ಸ್ವೀಕೃತವಾದ ಅರ್ಜಿಗಳಲ್ಲಿ ಸುಮಾರು 90 % ವಿಲೇವಾರಿಯಾಗಿ ಪರಿಹಾರ ಒದಗಿಸಲಾಗಿದೆ. ಶೇ 10 ರಷ್ಟು ಕಾನೂನು ತೊಡಕುಗಳಿಂದ ಪರಿಹರಿಸಲು ಸಾಧ್ಯವಾಗಿಲ್ಲ ಎಂದರು.

ಹೋಬಳಿ ಮಟ್ಟದಲ್ಲಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೆ ಪರಿವರ್ತಿಸಿ ಇಂದು ಬೂದನೂರು ಗ್ರಾಮದಲ್ಲಿ ಜನತಾ ದರ್ಶನವನ್ನು ಆಯೋಜಿಸಲಾಗಿದೆ. ನಗರ ಪ್ರದೇಶದಲ್ಲೂ ಮನೆ ಮನೆಗಳಿಗೆ ತೆರಳಿ ವಾಡ್೯ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅರ್ಜಿ ಸ್ವೀಕರಿಸಲಾಗುತ್ತಿದೆ.ಈಗಾಗಲೇ 14 ವಾಡ್೯ಗಳಲ್ಲಿ ಮನೆ- ಮನೆ ಭೇಟಿ ಮಾಡಲಾಗಿದೆ ಎಂದರು.

ಬೂದನೂರು ಗ್ರಾಮದಲ್ಲಿ ಈ -ಸ್ವತ್ತು ಆಂದೋಲನವನ್ನು ಹಮ್ಮಿಕೊಂಡು ಕಲಾಮಿತಿಯೊಳಗೆ ಈ- ಸ್ವತ್ತು ವಿತರಣೆಯಾಗಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜನತಾ ದರ್ಶನದಲ್ಲಿ ಇಂದು ಸ್ವೀಕೃತವಾಗಿರುವ ಅರ್ಜಿಗಳನ್ನು ಸಾಧ್ಯವಾದಲ್ಲಿ ಸ್ಥಳದಲ್ಲೇ ಪರಿಹರಿಸಲಾಗುವುದು. ಉಳಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನೀಡಿ ಒಂದು ತಿಂಗಳೊಳಗೆ ಪರಿಹರಿಸುವಂತೆ ಸೂಚನೆ ನೀಡಲಾಗುವುದು ಎಂದರು.

ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಮಾತನಾಡಿ, ಸುಮಾರು 15000 ಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಮಾಡಿಕೊಡಲಾಗಿದೆ.
ಗ್ರಾಮ ಮಟ್ಟದಲ್ಲಿ ಪೌತಿ ಖಾತೆ, ಈ ಸ್ವತ್ತು ಆಂದೋಲನ, ಜನತಾ ದರ್ಶನ ಕಾರ್ಯಕ್ರಮ ಆಯೋಜನೆಗಳಿಂದ ಜನರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಮಂಡ್ಯ ತಹಶಿಲ್ದಾರ್ ಶಿವಕುಮಾರ್ ಬಿರಾದರ್, ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

7 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

7 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

8 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

8 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

8 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

9 hours ago