ಮಂಡ್ಯ

ಸರ್ಕಾರದ ಯೋಜನೆಗಳು ಜನರಿಗೆ ಸದುಪಯೋಗವಾಗಲಿ : ಶಾಸಕ ‌ ಪಿ.ರವಿಕುಮಾರ್

ಮಂಡ್ಯ: ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲೆಗೆ ಒದಗಿಸುವುದು ಜನತಾ ದರ್ಶನದ ಉದ್ದೇಶವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಇಂದು ಹಳೇ ಬೂದನೂರು ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಈ ಹಿಂದೆ ಬಸರಾಳು, ಕೆರಗೋಡು ಹೋಬಳಿ ಮಟ್ಟದಲ್ಲಿ ಜನತಾ ದರ್ಶನ ಆಯೋಜಿಸಲಾಗುತ್ತಿತ್ತು, ಸುಮಾರು 5000 ಜನರು ಭಾಗವಹಿಸಿ ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸುತ್ತಿದ್ದರೂ, ಸ್ವೀಕೃತವಾದ ಅರ್ಜಿಗಳನ್ನು ಒಂದು ತಿಂಗಳು ಕಾಲಮಿತಿಯೊಳಗೆ ಪರಿಹರಿಸಲಾಗುತ್ತಿತ್ತು. ಸ್ವೀಕೃತವಾದ ಅರ್ಜಿಗಳಲ್ಲಿ ಸುಮಾರು 90 % ವಿಲೇವಾರಿಯಾಗಿ ಪರಿಹಾರ ಒದಗಿಸಲಾಗಿದೆ. ಶೇ 10 ರಷ್ಟು ಕಾನೂನು ತೊಡಕುಗಳಿಂದ ಪರಿಹರಿಸಲು ಸಾಧ್ಯವಾಗಿಲ್ಲ ಎಂದರು.

ಹೋಬಳಿ ಮಟ್ಟದಲ್ಲಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೆ ಪರಿವರ್ತಿಸಿ ಇಂದು ಬೂದನೂರು ಗ್ರಾಮದಲ್ಲಿ ಜನತಾ ದರ್ಶನವನ್ನು ಆಯೋಜಿಸಲಾಗಿದೆ. ನಗರ ಪ್ರದೇಶದಲ್ಲೂ ಮನೆ ಮನೆಗಳಿಗೆ ತೆರಳಿ ವಾಡ್೯ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅರ್ಜಿ ಸ್ವೀಕರಿಸಲಾಗುತ್ತಿದೆ.ಈಗಾಗಲೇ 14 ವಾಡ್೯ಗಳಲ್ಲಿ ಮನೆ- ಮನೆ ಭೇಟಿ ಮಾಡಲಾಗಿದೆ ಎಂದರು.

ಬೂದನೂರು ಗ್ರಾಮದಲ್ಲಿ ಈ -ಸ್ವತ್ತು ಆಂದೋಲನವನ್ನು ಹಮ್ಮಿಕೊಂಡು ಕಲಾಮಿತಿಯೊಳಗೆ ಈ- ಸ್ವತ್ತು ವಿತರಣೆಯಾಗಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜನತಾ ದರ್ಶನದಲ್ಲಿ ಇಂದು ಸ್ವೀಕೃತವಾಗಿರುವ ಅರ್ಜಿಗಳನ್ನು ಸಾಧ್ಯವಾದಲ್ಲಿ ಸ್ಥಳದಲ್ಲೇ ಪರಿಹರಿಸಲಾಗುವುದು. ಉಳಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನೀಡಿ ಒಂದು ತಿಂಗಳೊಳಗೆ ಪರಿಹರಿಸುವಂತೆ ಸೂಚನೆ ನೀಡಲಾಗುವುದು ಎಂದರು.

ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಮಾತನಾಡಿ, ಸುಮಾರು 15000 ಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಮಾಡಿಕೊಡಲಾಗಿದೆ.
ಗ್ರಾಮ ಮಟ್ಟದಲ್ಲಿ ಪೌತಿ ಖಾತೆ, ಈ ಸ್ವತ್ತು ಆಂದೋಲನ, ಜನತಾ ದರ್ಶನ ಕಾರ್ಯಕ್ರಮ ಆಯೋಜನೆಗಳಿಂದ ಜನರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಮಂಡ್ಯ ತಹಶಿಲ್ದಾರ್ ಶಿವಕುಮಾರ್ ಬಿರಾದರ್, ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago