ಮಂಡ್ಯ

ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳನ್ನು ಮನೆ ಅತಿಥಿಗಳಾಗಿ ಬರಮಾಡಿಕೊಳ್ಳೊಣ: ಶಾಸಕ ಪಿ ರವಿಕುಮಾರ್

ಮಂಡ್ಯ: ಮುಂಬರುವ ಡಿಸೆಂಬರ್ ೨೦, ೨೧, ಮತ್ತು ೨೨ ರಂದು ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳನ್ನು ಅತಿ ಗಣ್ಯರು,ಗಣ್ಯರು, ಆಹ್ವಾನಿತರು, ನೋಂದಾಯಿತ ಸದಸ್ಯರು ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ವಸತಿ ಸೌಲಭ್ಯ ಕಲ್ಪಿಸಿ ಎಂದು  ಶಾಸಕ ಪಿ. ರವಿಕುಮಾರ್ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನ ವಸತಿ ಸಮಿತಿ ಸದಸ್ಯರನ್ನುದ್ದೇಶಿಸಿ ಅವರು ಮಾತನಾಡಿದರು.

ಸೆ.೧೫ ರೊಳಗೆ ಸಮ್ಮೇಳನದ ನೋಂದಣಿ ಸಮಿತಿಯೊಂದಿಗೆ ಸಭೆ ನಡೆಸಿ ವಸತಿ ಕಲ್ಪಿಸ ಬಹುದಾದ ಹೋಟೆಲ್‌ಗಳು,ಸಮುದಾಯ ಭವನಗಳು, ಹಾಸ್ಟೆಲ್‌ಗಳು,ರೆಸಾರ್ಟ್ ಪಟ್ಟಿ ತಯಾರಿಸಲಾಗುವುದು. ಈ ಕೆಲಸಕ್ಕಾಗಿ ಪಿಡಿಒ, ಇಓಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸದಸ್ಯರನ್ನು ಬಳಸಿಕೊಳ್ಳಲಾಗುವುದು ಎಂದರು.

ಸಮ್ಮೇಳನಕ್ಕೆ ಬಂದವರನ್ನು ‘ಮನೆ ಅತಿಥಿ’ಯಾಗಿ ಉಳಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಲಾಗುವುದು. ಸಾಮಾಜಿಕ ಜಾಲತಾಣಗಳು ಮತ್ತು ನಗರದಲ್ಲಿ ರ‍್ಯಾಲಿಗಳನ್ನು ನಡೆಸುವ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರಿ ಕಚೇರಿಗಳು, ಪೆಟ್ರೋಲ್ ಬಂಕ್ ಮುಂತಾದ ಕಡೆ ಸಮ್ಮೇಳನದ ಲೋಗೋವನ್ನು ಒಳಗೊಂಡ ಫ್ಲೆಕ್ಸ್ಗಳನ್ನು ಶೀಘ್ರವೇ ಅಳವಡಿಸಲಾಗುವುದು. ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಸೂಚಿಸಲಾಗುವುದು ಎಂದರು.

ಶಿಕ್ಷಣ, ಕಂದಾಯ ಇಲಾಖೆ ಮತ್ತು ಉಪ ಸಮಿತಿಯ ಸದಸ್ಯರನ್ನು ಬಳಸಿಕೊಂಡು ಸಾಧಕ ಬಾಧಕಗಳನ್ನು ನೋಡಿಕೊಂಡು ವಸತಿ ಪ್ರದೇಶಗಳನ್ನು ನಿರ್ಧರಿಸಲಾಗುವುದು. ಅದಕ್ಕೂ ಮುನ್ನ ಹೋಟೆಲ್ ಮಾಲೀಕರ, ಸಮುದಾಯ ಭವನಗಳ ಮಾಲೀಕರ ಜೊತೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.

ಸಭೆಯ ಆರಂಭಕ್ಕೂ ಮುನ್ನ ಉಪವಿಭಾಗಾಧಿಕಾರಿ ಶಿವಮೂರ್ತಿ ವಸತಿ ಸಮಿತಿಯ ರೂಪುರೇಷೆಗಳನ್ನು ನೀಡಿ, ಡಿಸೆಂಬರ್ ೧೦ ರೊಳಗೆ ನೋಂದಾಯಿಸಿಕೊಂಡ ಸದಸ್ಯರಿಗೆ ಮಾತ್ರ ವಸತಿ ಕಲ್ಪಿಸಬಹುದು. ಮಂಡ್ಯ,ಮದ್ದೂರು, ಶ್ರೀರಂಗಪಟ್ಟಣ, ಮೈಸೂರು ಮುಂತಾದ ಕಡೆಗಳಲ್ಲಿ ಇರುವ ಹೋಟೆಲ್, ಸಮುದಾಯ ಭವನ, ಹಾಸ್ಟೆಲ್‌ಗಳು, ರೆಸಾರ್ಟ್ಗಳನ್ನು ಗುರುತಿಸಲಾಗುವುದು. ಸಮ್ಮೇಳನಕ್ಕ್ಕೆ ನೋಂದಣಿ ಮಾಡಿಸಿಕೊಂಡ ಸದಸ್ಯರಿಗೆ ವಸತಿ ವ್ಯವಸ್ಥೆ ನೀಡಲು ಆದ್ಯತೆ ನೀಡಲಾಗುವುದು. ಮೂರು ದಿನ ಮುಂಚೆ ವಸತಿಗೆ ನಿಗದಿಪಡಿಸಿದ ಕಟ್ಟಡಗಳನ್ನು ಸಮಿತಿಯ ವಶಕ್ಕೆ ಪಡೆಯಬೇಕು ಎಂದರು.

ಸಮ್ಮೇಳನ ಸಮನ್ವಯ ಸಮಿತಿ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಮಾತನಾಡಿ ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ೧೦,೦೦೦ ಜನಕ್ಕೆ ವಸತಿ ಕಲ್ಪಿಸಲಾಗಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು.ಕಲಾತಂಡಗಳನ್ನು ಸಮುದಾಯ ಭವನಗಳಲ್ಲಿ ಉಳಿಯಲು ಅವಕಾಶ ಮಾಡಿಕೊಡಬಹುದು ಎಂದರು.

ಸಮಿತಿಯ ಸದಸ್ಯ ಟಿ.ಎಸ್.ಸತ್ಯಾನಂದ ಮಾತನಾಡಿ ಅತಿ ಮುಖ್ಯ ಗಣ್ಯರಿಗೆ ಅಮರಾವತಿ ಹೋಟೆಲ್‌ನಲ್ಲಿ ವಸತಿ ಕಲ್ಪಿಸಿ ಉಳಿದವರಿಗೆ ಮೈಸೂರಿನಲ್ಲಿ ಮಾಡಬೇಕಾಗುತ್ತದೆ. ವಸತಿ ವ್ಯವಸ್ಥೆ ಕಲ್ಪಿಸುವ ಕಟ್ಟಡಗಳಿಗೆ ಖ್ಯಾತ ಕವಿಗಳ ಹೆಸರುಗಳನ್ನು ಇಡಬೇಕು. ಪತ್ರಿಕಾ ಪ್ರಕಟಣೆ ನೀಡಿ ಆಸಕ್ತಿಯುಳ್ಳ ಜನರು ‘ಮನೆ ಅತಿಥಿ’ಯಾಗಿ ವಾಸ್ತವ್ಯ ನೀಡಲು ಬಯಸುವವರ ಪಟ್ಟಿ ಮಾಡಬಹುದು. ಇನ್ಫೋಸಿಸ್ ಸಂಸ್ಥೆಯಲ್ಲಿ ೧೦೦೦ ಜನಕ್ಕೆ ವಸತಿ ಕಲ್ಪಿಸಬಹುದು ಎಂಬ ಸಲಹೆ ನೀಡಿದರು.

ಸಮಿತಿ ಸದಸ್ಯ ಅಪೂರ್ವಚಂದು ಈ ಹಿಂದೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಚರ್ಚಿತ ವಾದ ವಿಷಯಗಳನ್ನು ಸಭೆಯ ಮುಂದಿಟ್ಟರು. ನೋಡಲ್ ಅಧಿಕಾರಿಗಳು ಮತ್ತು ಮಾಹಿತಿ ಕೇಂದ್ರಗಳನ್ನು ಸಮ್ಮೇಳನಕ್ಕೆ ಬರುವವರಿಗೆ ಮಾರ್ಗದರ್ಶನ ನೀಡಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಂ, ತಹಸಿಲ್ದಾರ್ ಶಿವಕುಮಾರ್ ಬಿರಾದಾರ, ಬೇಲೂರು ಸೋಮಶೇಖರ್, ಕುರುಬರ ಸಂಘದ ಅಧ್ಯಕ್ಷ ಸುರೇಶ್, ಎಚ್.ಕೆ. ರುದ್ರಪ್ಪ,ಸತ್ಯಪ್ಪ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ವಿ ಪಣ್ಣೆದೊಡ್ಡಿ, ಬಿ.ಎಂ.ಅಪ್ಪಾಜಪ್ಪ, ಹೊಳಲು ಶ್ರೀಧರ್, ಧನಂಜಯ ದರಸಗುಪ್ಪೆ, ಎಲ್.ಕೃಷ್ಣ, ಸುನಿಲ್ ಕುಮಾರ್, ಹನುಮಂತಯ್ಯ,ದೇವರಾಜು ಕೊಪ್ಪ ಮುಂತಾದವರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

9 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

10 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

11 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

12 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

13 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

14 hours ago