ಮಂಡ್ಯ

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ: ಎನ್. ಚಲುವರಾಯಸ್ವಾಮಿ

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮಂಡ್ಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡೆ ಸ್ವಚ್ಛತೆ ಕಡೆ- ರನ್ ಫಾರ್ ಮಂಡ್ಯ -ಮ್ಯಾರಥಾನ್” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಮಂಡ್ಯ ವಿಧಾನ ಸಭಾ ಶಾಸಕರಾದ ಪಿ. ರವಿಕುಮಾರ್ ಅವರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಶಾಸಕರಾದ ಪಿ. ರವಿಕುಮಾರ್ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಸೇರಿ ಯಶಸ್ವಿಯಾಗಿ ಕಾರ್ಯಕ್ರಮ ಮಾಡಲಾಯಿತು. ಅಂದು ಕೂಡ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಂಡಿದ್ದವು ಎಂದು ಅವರು ತಿಳಿಸಿದರು.

ಮಂಡ್ಯ ಶಾಸಕರಾದ ಪಿ. ರವಿ ಕುಮಾರ್ ಅವರು ಉತ್ತಮ ರಸ್ತೆ ನಿರ್ಮಾಣ ಮಾಡಿದ್ದಾರೆ. ವಿಶ್ವದರ್ಜೆಯ ಸರ್ಕಲ್ ಮಾಡಲು ಕೈಹಾಕಿದ್ದಾರೆ. ಅವರಿಗೆ ಜನತೆಯ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ ಅವರು ರನ್ ಫಾರ್ ಮಂಡ್ಯ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಸಾನಿಧ್ಯ ವಹಿಸಿ ಮಾತನಾಡಿ, 2047 ನೇ ಇಸವಿಗೆ ನಮ್ಮ ದೇಶಕ್ಕೆ ಸ್ವತಂತ್ರ ಬಂದು 100 ವರ್ಷ ಪೂರ್ಣಗೊಳ್ಳುತ್ತದೆ. ಆದ್ದರಿಂದ ನಮ್ಮ ದೇಶದ ನಂ 1 ದೇಶವನ್ನಾಗಿ ಮಾಡವ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ದೇಶದ ಅಭಿವೃದ್ಧಿ ಕೆಲಸಗಳು ಆಗಬೇಕು ಕನಸು ನನಸಾಗಬೇಕು ಎಂದು ಹೇಳಿದರು.

ಮಕ್ಕಳು ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು ಮತ್ತು ಜಿಲ್ಲೆಯನ್ನು ಸ್ವಚ್ಛತೆಯಿಂದ ಶುದ್ಧವಾಗಿ ನೋಡಿಕೊಳ್ಳುವ ಕಾರ್ಯ ಮಾಡಬೇಕು. ನಮ್ಮ ನಡೆ ಸ್ವಚ್ಛತೆ ಕಡೆ ರನ್ ಫಾರ್ ಮಂಡ್ಯ ಮ್ಯಾರಥಾನ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು

ಸಂಗೀತ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸಾಧು ಕೋಕಿಲ ರವರು ಮಾತನಾಡಿ, ಪರಿಸರ ನೈರ್ಮಲ್ಯ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಕಸ ವಿಲೇವಾರಿ, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ, ಮನೆ ಮತ್ತು ಶಾಲಾ/ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಮುಖ್ಯವಾಗಿದೆ. ಪ್ರತಿಯೊಬ್ಬರು ಮೊದಲು ಮನೆಯಿಂದಲೇ ಸ್ವಚ್ಛತೆ ಕಾರ್ಯವನ್ನು ಮಾಡಬೇಕು, ಮನೆಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದರಿಂದ ಜಿಲ್ಲೆಯನ್ನು ಸ್ವಚ್ಛತೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಚಲನ ಚಿತ್ರ ನಟ ವಿರಾಟ್ ಮಾತನಾಡಿ ಸ್ವಚ್ಛತೆ ಆರೋಗ್ಯದ ಮೂಲ. ಮನೆ ಸುತ್ತಮುತ್ತಲಿನ ಪರಿಸರ, ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಸಾಂಕ್ರಾಮಿಕ ರೋಗಗಳನ್ನು ತಡೆಯಲು ಅತ್ಯಗತ್ಯ. ಸ್ವಚ್ಛ ಭಾರತ್ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಸುಂದರ ಪರಿಸರವನ್ನು ನಿರ್ಮಿಸೋಣ ಎಂದು ತಿಳಿಸಿದರು.

ಚಲನ ಚಿತ್ರ ನಟಿ ರಾಧಿಕಾ ನಾರಾಯಣ್ ರವರು ಮಾತನಾಡಿ ಮನೆಯಿಂದ ಸ್ವಚ್ಛತೆಯನ್ನು ಮಾಡಬೇಕು. ಪರಿಸರ ನೈರ್ಮಲ್ಯ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನ ಸಭಾ ಶಾಸಕರಾದ ಪಿ. ರವಿಕುಮಾರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಪಿ. ಪ್ರಕಾಶ್, ಜಿಲ್ಲಾಧಿಕಾರಿಗಳು ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾ ರಾಣಿ, ನಗರಾಭಿವೃದ್ಧಿ ಕೋಶ ಯೋಜನಾ ಅಧಿಕಾರಿ ಟಿ. ಎನ್. ನರಸಿಂಹ ಮೂರ್ತಿ,
ನಗರ ಸಭೆಆಯುಕ್ತರು ಪಂಪಶ್ರೀ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

6 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

7 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

8 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

8 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

9 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

9 hours ago