ಮಂಡ್ಯ

ಮಹಿಳೆ ದಿನಾಚರಣೆಗಳು ಆತ್ಮಾವಲೋಕನದ ವೇದಿಕೆಗಳಾಗಲಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಮಹಿಳೆ ಸಮಾಜದ ಶಕ್ತಿ.  ಹೀಗಿದ್ದರು ಸೂಪರ್ ಮೆನ್ ಎಂದು ಹೇಳುತ್ತಾರೆ ವಿನಹಃ ಸೂಪರ್ ವುಮೆನ್ ಎಂಬ ಪದ ಹೇಳಲು ಸಮಾಜ ತಯಾರಿಲ್ಲ, ಹೀಗಾಗಿ ಮಹಿಳಾ ದಿನಾಚರಣೆಗಳು ಆತ್ಮವಲೋಕಲನದ ವೇದಿಕೆಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು.

ಶನಿವಾರ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರ ಅಭಿವೃದ್ಧಿಗೆ ಬೆಂಬಲ ನೀಡಿದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮಹಿಳೆಯರಿಗೆ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಒದಗಿಸಬೇಕು  ಎಂದು ಹೇಳಿದರು.

ಹೆಣ್ಣಿಲ್ಲದೆ ಜೀವ ಮತ್ತು ಜೀವನವಿಲ್ಲ ಮಹಿಳೆ ಪ್ರಪಂಚದ ದೊಡ್ಡ ಶಕ್ತಿ. ಮಹಿಳೆಗೆ ಇನ್ನೊಂದು ಜೀವಕ್ಕೆ ಜನ್ಮ ನೀಡುವ ಶಕ್ತಿ ಹಾಗೂ ಇಡೀ ಕುಟುಂಬವನ್ನು ನಿರ್ವಹಿಸುವ ಶಕ್ತಿ ಇದೆ ಎಂದರು.

ಸ್ವಾಮಿ ವಿವೇಕನಂದರು ಮಹಿಳೆಯರಿಗೆ ಅಂತರಿಕವಾಗಿ ಮಹಾಶಕ್ತಿ ಇದೆ. ಪುರುಷರು ಮಹಿಳೆಯರ ಶಕ್ತಿ ಕುಂದಿಸದೆ ಇದ್ದರೆ ಸಾಕು. ಮಹಿಳೆ ತನಾಗಿಯೇ ಸಮಾಜದಲ್ಲಿ ಬೆಳೆಯುತ್ತಾಳೆ ಎಂದು ಹೇಳಿದ್ದಾರೆ ಅದನ್ನು ಪಾಲಿಸೋಣ ಎಂದು ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸ್ವಾತಂತ್ರ್ಯಕ್ಕೂ ಹಿಂದೆ ಮಹಿಳೆಯರು ಕೇವಲ ಮನೆಯ ಕೆಲಸಕ್ಕೆ ಮಾತ್ರ ಸೀಮಿತವಾಗಿದ್ದರು. ಆದರೆ ಇಂದು ಅಟೋರಿಕ್ಷಾ ದಿಂದ ಅಂತರಿಕ್ಷಾ ತಲುಪುವ ರಾಕೆಟ್ ನ್ನು ಉಡಾವಣೆ ಮಾಡುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಇದು ಮಹಿಳೆಯರಲ್ಲಿ ಎಂತಹ ಅಭೂತಪೂರ್ವ ಆತ್ಮವಿಶ್ವಾಸ ಮತ್ತು ಶ್ರದ್ಧೆ ಇದೆ ಎಂಬುದನ್ನು ಎತ್ತಿ ತೋರುತ್ತದೆ ಎಂದು ತಿಳಿಸಿದರು.

ಮಹಿಳೆಯರ ರಕ್ಷಣೆ ಹಾಗೂ ಹಕ್ಕುಗಳನ್ನು ಕಪಾಡಲು ಹಲವಾರು ಬಲಿಷ್ಠ ಕಾನೂನುಗಳನ್ನು ಬಿ.ಎನ್ ಎಸ್ ಕಾಯಿದೆ ಯಲ್ಲಿ ತರಲಾಗಿದೆ‌ ಮಹಿಳೆಯರು ತಮ್ಮ ವಿರುದ್ಧ ಅನ್ಯಾಯ ನೇದಾಗ ದೈರ್ಯವಾಗಿ ದನಿ ಎತ್ತಬೇಕು ಎಂದರು.

ಇಂದಿನ ಸಮಾಜದಲ್ಲಿ ಸಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರನ್ನು ತೇಜೋವದೆ ಮಾಡಿ ಗೌರವಕ್ಕೆ ದಕ್ಕೆ ತರುತ್ತಾರೆ. ಇವುಗಳ ವಿರುದ್ಧವು ಗಟ್ಟಿಯಾಗಿ ಹೋರಾಟ ಮಾಡುವ ದಿಟ್ಟತನವನ್ನು ಮಹಿಳೆಯರು ಬೆಳಸಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜ ಮೂರ್ತಿ, ಆಯುಷ್ ಇಲಾಖೆಯ ಹಿರಿಯ ವೈದ್ಯಧಿಕಾರಿ ಬಿ. ಎಸ್ ಸೀತಾಲಕ್ಷ್ಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪುಷ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುಳ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರೂಪಶ್ರೀ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಧುಶ್ರೀ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶರಾದ ಎಸ್ ಹೆಚ್ ನಿರ್ಮಲ  ಸೇರಿದಂತೆ ಇತರರು  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

3 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

3 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

3 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

3 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

3 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

3 hours ago