ಮಂಡ್ಯ

ವಿಕಸಿತ ಮಂಡ್ಯಕ್ಕಾಗಿ ಎಲ್ಲರೂ ಜೊತೆಯಾಗೋಣ: ಸಂಸದೆ ಸುಮಲತಾ!

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಇಂದು(ಏ.೫) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ತಾವು ಸ್ವತಂತ್ರ ಅಭ್ಯರ್ಥಿಯಾಗಿದ್ದ ವೇಳೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಬಗ್ಗೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾನು ಮೊದಲ ಬಾರಿಗೆ ಸಂಸದೆಯಾಗಿ-ಅದೂ ಸ್ವತಂತ್ರ ಅಭ್ಯರ್ಥಿಯಾಗಿ ಇಷ್ಟೆಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಯಿತು. ಇದೇ ವೇಳೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಿರಂತರ ಬೆಂಬಲ ಮತ್ತು ಬದ್ಧತೆ ತೋರಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

 

ಸುಮಲತಾ ಅಂಬರೀಶ್‌ ಅವರು ತಾವು ಅಧಿಕಾರಾವಧಿಯಲ್ಲಿ ಮಾಡಿ ಪ್ರಗತಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸುಮಲತಾ ಅವರ ಟ್ವೀಟ್‌ನಲ್ಲೇನಿದೆ?

ಎಲ್ಲರಿಗೂ ನನ್ನ ನಮಸ್ಕಾರಗಳು, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಗತಿಗಾಗಿ ತಮ್ಮೆಲ್ಲರ ಬೆಂಬಲ ಹಾಗೂ ಸಹಕಾರದೊಂದಿಗೆ ಆರಂಭಿಸಿರುವ ಅಭಿವೃದ್ಧಿಯ ಪಯಣದಲ್ಲಿ ಕಂಡಿರುವ ಯಶಸ್ಸು ಹಾಗೂ ಮುಂದಿರುವ ಗುರಿಯ ಕುರಿತು ಹಂಚಿಕೊಳ್ಳುವ ಅವಕಾಶ ಲಭಿಸಿರುವುದು ನನ್ನ ಸೌಭಾಗ್ಯ ಎಂದು ಭಾವಿಸುತ್ತೇನೆ. ಸ್ವಾಭಿಮಾನಿ ಮಂಡ್ಯ ಜನತೆಯ ಸಮರ್ಪಿತ ಪ್ರತಿನಿಧಿಯಾಗಿ, ನಿಮ್ಮ ಯೋಗಕ್ಷೇಮಕ್ಕೆ ನನ್ನ ಬದ್ಧತೆ ನಮ್ಮ ಮಂಡ್ಯ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿಯನ್ನು ಸಾಧಿಸುವಂತೆ ಮಾಡಲು ಸಾಧ್ಯವಾಗಿಸಿದೆ. ಓರ್ವ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ತಮ್ಮೆಲ್ಲರ ಆಶೀರ್ವಾದದಿಂದ ಈ ಕಾವೇರಿ ಹರಿಯುವ ಪುಣ್ಯಭೂಮಿಯ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಇರುವ ಅಡೆತಡೆಗಳ ವಿರುದ್ಧ ಗಟ್ಟಿಯಾಗಿ ಧ್ವನಿಯೆತ್ತಿರುವ ಬಗ್ಗೆ ಹಾಗೂ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಮ್ಮ ಮುಂದಿಡುತ್ತಿದ್ದೇನೆ.

ನಮ್ಮ ಮಂಡ್ಯದ ಸಮಗ್ರ ಅಭಿವೃದ್ಧಿಗೆ ನಿಮ್ಮ ನಿರಂತರ ಬೆಂಬಲ ಮತ್ತು ಬದ್ಧತೆಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಾನು ಮೊದಲ ಬಾರಿಗೆ ಸಂಸದೆಯಾಗಿ-ಅದೂ ಸ್ವತಂತ್ರ ಅಭ್ಯರ್ಥಿಯಾಗಿ ಇಷ್ಟೆಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಯಿತು. ನಮ್ಮ ಮಂಡ್ಯದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ವಿಕಸಿತ ಮಂಡ್ಯಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡೋಣ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

44 mins ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

46 mins ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

48 mins ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

51 mins ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

53 mins ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

57 mins ago