ಮಂಡ್ಯ

ಯುವಕನ ಹತ್ಯೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಮಂಡ್ಯ : ಯುವಕನೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದ ಆರೋಪಿಗೆ ಶ್ರೀರಂಗಪಟ್ಟಣ 3ನೇ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮದ ಶರತ್ ಕುಬೇರ ಅಲಿಯಾಸ್ ಅಪ್ಪಿ ಜೀವಾವಧಿ ಶಿಕ್ಷೆಗೆ ಗುರಿಯಾದನು.

ಘಟನೆ ಹಿನ್ನೆಲೆ: 2022ರ ಜು.27ರ ರಾತ್ರಿ 8.45ರ ಸಮಯದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ಬೆಳಗೊಳ ಗ್ರಾಮದ ಸವಿತ ವೈನ್‌ಸ್ಟೋರ್ ಮುಂಭಾಗ ನಿಂತಿದ್ದ ಬಿ.ವಿ. ರವಿ (30) ಎಂಬಾತನ ಮೇಲೆ ಶರತ್ ಕುಬೇರ ಅಲಿಯಾಸ್ ಅಪ್ಪಿ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ರವಿಯನ್ನು ಮೈಸೂರಿನ ಬೃಂದಾವನ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸುವಷ್ಟರಲ್ಲಿ ಆತ ಮೃತಪಟ್ಟಿದ್ದ.

ಈ ಬಗ್ಗೆ ಮೃತನ ತಮ್ಮ ಚಂದ್ರು ಎಂಬವರು ಕೆ.ಆರ್. ಸಾಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಕೆ.ಆರ್. ಸಾಗರ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂದಿನ ಸಿಪಿಐ ಡಿ. ಯೋಗೇಶ್ ಹಾಗೂ ಪಿಎಸ್‌ಐ ಟಿ.ಎಂ. ಪುನೀತ್ ಅವರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಸಂಬಂಧ ಶ್ರೀರಂಗಪಟ್ಟಣದ 3ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಜೋಸ್ನಾ ಅವರು ಆರೋಪಿ ಶರತ್ ಕುಬೇರನಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರಿ ಅಭಿಯೋಜಕರಾದ ಪ್ರಮಲ್ಲ ಮತ್ತು ನಾಜೀಮಾ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago