ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದವರಾಗಿ ಸಮುದಾಯವನ್ನು ಶಕ್ತಿಯಾಗಿ ಬಳಸಿಕೊಂಡು ಶಾಸಕ ಸ್ಥಾನವನ್ನು ಅಲಂಕರಿಸಕೊಂಡಿದ್ದು, ಬಸವಣ್ಣನವರ ವಿರುದ್ಧ ಹೊಳೆಗೆ ಹಾರಿಕೊಂಡರು ಎಂದು ಹೇಳಿಕೆ ನೀಡಿರುವುದು ಅಸಹನೀಯ. ಈ ರೀತಿಯ ಮಾತುಗಳನ್ನು ಆಡಿದವರನ್ನು ಸಮುದಾಯ ಕ್ಷಮಿಸುವುದಿಲ್ಲ ಎಂದು ಆಕ್ರೋಶಗೊಂಡರು.
ಪ್ರಚಾರಕ್ಕಾಗಿ ಬಸವಣ್ಣನವರನ್ನು ಹೀಯಾಳಿಸುವ ಮಟ್ಟಕ್ಕೆ ಮಾತುಗಳನ್ನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ. ತಮ್ಮ ಹೇಳಿಕೆಯ ಮೂಲಕ ಬಸವತತ್ವದ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು ಎಂದು ಕರೆ ನೀಡಿದರು.
ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಮಾತನಾಡಿ, ರಾಜಕಾರಣಿಗಳು ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಾದುದಲ್ಲ, ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಓಟ್ ಬ್ಯಾಂಕ್ ಮಾಡಿಕೊಂಡು ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ, ಬಿಜೆಪಿ ಪಕ್ಷ ಕೂಡಲೇ ಇವರನ್ನು ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಹಿಸದ ಬಿಜೆಪಿ ನಾಯಕರು ಈ ರೀತಿಯ ವರ್ತನೆಗೆ ಮುಂದಾಗಿದ್ದು, ಸರ್ಕಾರ ಕೂಡಲೇ ಇದರ ಸಂಬಂಧ ಸೂಕ್ತ ಕ್ರಮ ಕೈಗೊಂಡು. ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಮದ್ದೂರು ಅಧ್ಯಕ್ಷ ಶಿವಲಿಂಗಪ್ಪ, ಶಿವರುದ್ರಸ್ವಾಮಿ, ಬೆಳ್ಳಪ್ಪ, ಆನಂದ್, ವೀರಭದ್ರಯ್ಯ, ಮಂಜುನಾಥ್, ಇದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…