ಮಂಡ್ಯ

ಯತ್ನಾಳ್‌ ವಿರುದ್ದ ಲಿಂಗಾಯುತ ಸ್ವಾಮೀಜಿ ಆಕ್ರೋಶ

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದವರಾಗಿ ಸಮುದಾಯವನ್ನು ಶಕ್ತಿಯಾಗಿ ಬಳಸಿಕೊಂಡು ಶಾಸಕ ಸ್ಥಾನವನ್ನು ಅಲಂಕರಿಸಕೊಂಡಿದ್ದು, ಬಸವಣ್ಣನವರ ವಿರುದ್ಧ ಹೊಳೆಗೆ ಹಾರಿಕೊಂಡರು ಎಂದು ಹೇಳಿಕೆ ನೀಡಿರುವುದು ಅಸಹನೀಯ. ಈ ರೀತಿಯ ಮಾತುಗಳನ್ನು ಆಡಿದವರನ್ನು ಸಮುದಾಯ ಕ್ಷಮಿಸುವುದಿಲ್ಲ ಎಂದು ಆಕ್ರೋಶಗೊಂಡರು.

ಪ್ರಚಾರಕ್ಕಾಗಿ ಬಸವಣ್ಣನವರನ್ನು ಹೀಯಾಳಿಸುವ ಮಟ್ಟಕ್ಕೆ ಮಾತುಗಳನ್ನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ. ತಮ್ಮ ಹೇಳಿಕೆಯ ಮೂಲಕ ಬಸವತತ್ವದ ವಿರೋಧಿಯಾಗಿದ್ದು, ಸಮಾಜದಲ್ಲಿ ನಕಲಿ ಹಿಂದೂ ನಾಯಕರಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ಲಿಂಗಾಯತ ಸಮುದಾಯವು ದೂರ ಇಡಬೇಕು ಎಂದು ಕರೆ ನೀಡಿದರು.

ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಮಾತನಾಡಿ, ರಾಜಕಾರಣಿಗಳು ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಾದುದಲ್ಲ, ಬಸವಣ್ಣನವರ ತತ್ವಾದರ್ಶಗಳನ್ನು ತಮ್ಮ ಓಟ್ ಬ್ಯಾಂಕ್ ಮಾಡಿಕೊಂಡು ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ, ಬಿಜೆಪಿ ಪಕ್ಷ ಕೂಡಲೇ ಇವರನ್ನು ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಹಿಸದ ಬಿಜೆಪಿ ನಾಯಕರು ಈ ರೀತಿಯ ವರ್ತನೆಗೆ ಮುಂದಾಗಿದ್ದು, ಸರ್ಕಾರ ಕೂಡಲೇ ಇದರ ಸಂಬಂಧ ಸೂಕ್ತ ಕ್ರಮ ಕೈಗೊಂಡು. ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮದ್ದೂರು ಅಧ್ಯಕ್ಷ ಶಿವಲಿಂಗಪ್ಪ, ಶಿವರುದ್ರಸ್ವಾಮಿ, ಬೆಳ್ಳಪ್ಪ, ಆನಂದ್, ವೀರಭದ್ರಯ್ಯ, ಮಂಜುನಾಥ್, ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

12 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

12 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago