ಮಂಡ್ಯ

ಸಾಹಿತ್ಯ ಸಮ್ಮೇಳನ | ‘ಆಹಾರ ಕ್ರಾಂತಿಗೆʼ ಆಹ್ವಾನ ನೀಡಿದ ಮಂಡ್ಯ ಜನತೆ

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಹೊಸ ಆಯಾಮವನ್ನೇ ನೀಡಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಾಹಾರ ನಿಷೇಧದ ವಿರುದ್ಧ ಮಂಡ್ಯ ಜಿಲ್ಲೆಯ ಪ್ರಬುದ್ಧ ಜನತೆ `ಆಹಾರ ಕ್ರಾಂತಿಗೆ ಆಹ್ವಾನʼ ನೀಡಿದ್ದಾರೆ. ಅಂದು ‘ವಿಚಾರ ಕ್ರಾಂತಿಗೆ ಆಹ್ವಾನʼ ವಿತ್ತ ಕುವೆಂಪು ಮೂಢನಂಬಿಕೆ, ಮಡಿವಂತಿಕೆ ಹಾಗೂ ಪ್ರಶ್ನಿಸದೆ ಒಪ್ಪಿನಡೆಯುವುರದ ವಿರುದ್ಧ ಖಂಡಿಸಿದ್ದರು. ಇಂದು ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಹಾರ ನಿಷೇಧದ ವಿರುದ್ಧ ಜಿಲ್ಲೆಯ ಜನ ಆಹಾರ ವೈವಿಧ್ಯಮಯ ಸಾಂಸ್ಕೃತಿಕತೆ ʻಆಹಾರ ಕ್ರಾಂತಿʼಗೆ ಆಹ್ವಾನ ನೀಡಿದ್ದಾರೆ.

ʻಆಹಾರ ಕ್ರಾಂತಿʼಗೆ ಆಹ್ವಾನ ಎಂಬ ಪೊಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ನಾಡಿನ ಪ್ರಜ್ಞಾವಂತರು, ಬುದ್ದಿಜೀವಿಗಳು ಮತ್ತು ಸಾಹಿತಿಗಳು ಬೆಂಬಲ ಸೂಚಿಸುತ್ತಿದ್ದಾರೆ.

ಬಾಡೂಟ ಬಳಗವು ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವೂ ಇರಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದೆ.

ಸಮ್ಮೇಳನ ಹತ್ತಿರವಾಗುತ್ತಿದ್ದಂತೆ ಈ ಅಭಿಯಾನವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಸ್ಯಾಹಾರದ ಜೊತೆಗೆ ಮಾಂಸಾಹಾರವೂ ಇರಲಿ ಎಂಬ ಸ್ಲೋಗನ್‌ಗಳು ಸಾಮಾಜಿಕ ಜಾಲತಾಣಗಳನ್ನು ವ್ಯಾಪಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

59 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago