ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಹೊಸ ಆಯಾಮವನ್ನೇ ನೀಡಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಾಹಾರ ನಿಷೇಧದ ವಿರುದ್ಧ ಮಂಡ್ಯ ಜಿಲ್ಲೆಯ ಪ್ರಬುದ್ಧ ಜನತೆ `ಆಹಾರ ಕ್ರಾಂತಿಗೆ ಆಹ್ವಾನʼ ನೀಡಿದ್ದಾರೆ. ಅಂದು ‘ವಿಚಾರ ಕ್ರಾಂತಿಗೆ ಆಹ್ವಾನʼ ವಿತ್ತ ಕುವೆಂಪು ಮೂಢನಂಬಿಕೆ, ಮಡಿವಂತಿಕೆ ಹಾಗೂ ಪ್ರಶ್ನಿಸದೆ ಒಪ್ಪಿನಡೆಯುವುರದ ವಿರುದ್ಧ ಖಂಡಿಸಿದ್ದರು. ಇಂದು ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಹಾರ ನಿಷೇಧದ ವಿರುದ್ಧ ಜಿಲ್ಲೆಯ ಜನ ಆಹಾರ ವೈವಿಧ್ಯಮಯ ಸಾಂಸ್ಕೃತಿಕತೆ ʻಆಹಾರ ಕ್ರಾಂತಿʼಗೆ ಆಹ್ವಾನ ನೀಡಿದ್ದಾರೆ.
ʻಆಹಾರ ಕ್ರಾಂತಿʼಗೆ ಆಹ್ವಾನ ಎಂಬ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ನಾಡಿನ ಪ್ರಜ್ಞಾವಂತರು, ಬುದ್ದಿಜೀವಿಗಳು ಮತ್ತು ಸಾಹಿತಿಗಳು ಬೆಂಬಲ ಸೂಚಿಸುತ್ತಿದ್ದಾರೆ.
ಬಾಡೂಟ ಬಳಗವು ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವೂ ಇರಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದೆ.
ಸಮ್ಮೇಳನ ಹತ್ತಿರವಾಗುತ್ತಿದ್ದಂತೆ ಈ ಅಭಿಯಾನವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಸ್ಯಾಹಾರದ ಜೊತೆಗೆ ಮಾಂಸಾಹಾರವೂ ಇರಲಿ ಎಂಬ ಸ್ಲೋಗನ್ಗಳು ಸಾಮಾಜಿಕ ಜಾಲತಾಣಗಳನ್ನು ವ್ಯಾಪಿಸಿವೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…