ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಹೊಸ ಆಯಾಮವನ್ನೇ ನೀಡಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಾಹಾರ ನಿಷೇಧದ ವಿರುದ್ಧ ಮಂಡ್ಯ ಜಿಲ್ಲೆಯ ಪ್ರಬುದ್ಧ ಜನತೆ `ಆಹಾರ ಕ್ರಾಂತಿಗೆ ಆಹ್ವಾನʼ ನೀಡಿದ್ದಾರೆ. ಅಂದು ‘ವಿಚಾರ ಕ್ರಾಂತಿಗೆ ಆಹ್ವಾನʼ ವಿತ್ತ ಕುವೆಂಪು ಮೂಢನಂಬಿಕೆ, ಮಡಿವಂತಿಕೆ ಹಾಗೂ ಪ್ರಶ್ನಿಸದೆ ಒಪ್ಪಿನಡೆಯುವುರದ ವಿರುದ್ಧ ಖಂಡಿಸಿದ್ದರು. ಇಂದು ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಹಾರ ನಿಷೇಧದ ವಿರುದ್ಧ ಜಿಲ್ಲೆಯ ಜನ ಆಹಾರ ವೈವಿಧ್ಯಮಯ ಸಾಂಸ್ಕೃತಿಕತೆ ʻಆಹಾರ ಕ್ರಾಂತಿʼಗೆ ಆಹ್ವಾನ ನೀಡಿದ್ದಾರೆ.
ʻಆಹಾರ ಕ್ರಾಂತಿʼಗೆ ಆಹ್ವಾನ ಎಂಬ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ನಾಡಿನ ಪ್ರಜ್ಞಾವಂತರು, ಬುದ್ದಿಜೀವಿಗಳು ಮತ್ತು ಸಾಹಿತಿಗಳು ಬೆಂಬಲ ಸೂಚಿಸುತ್ತಿದ್ದಾರೆ.
ಬಾಡೂಟ ಬಳಗವು ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವೂ ಇರಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದೆ.
ಸಮ್ಮೇಳನ ಹತ್ತಿರವಾಗುತ್ತಿದ್ದಂತೆ ಈ ಅಭಿಯಾನವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಸ್ಯಾಹಾರದ ಜೊತೆಗೆ ಮಾಂಸಾಹಾರವೂ ಇರಲಿ ಎಂಬ ಸ್ಲೋಗನ್ಗಳು ಸಾಮಾಜಿಕ ಜಾಲತಾಣಗಳನ್ನು ವ್ಯಾಪಿಸಿವೆ.
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…