ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಹೊಸ ಆಯಾಮವನ್ನೇ ನೀಡಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಾಹಾರ ನಿಷೇಧದ ವಿರುದ್ಧ ಮಂಡ್ಯ ಜಿಲ್ಲೆಯ ಪ್ರಬುದ್ಧ ಜನತೆ `ಆಹಾರ ಕ್ರಾಂತಿಗೆ ಆಹ್ವಾನʼ ನೀಡಿದ್ದಾರೆ. ಅಂದು ‘ವಿಚಾರ ಕ್ರಾಂತಿಗೆ ಆಹ್ವಾನʼ ವಿತ್ತ ಕುವೆಂಪು ಮೂಢನಂಬಿಕೆ, ಮಡಿವಂತಿಕೆ ಹಾಗೂ ಪ್ರಶ್ನಿಸದೆ ಒಪ್ಪಿನಡೆಯುವುರದ ವಿರುದ್ಧ ಖಂಡಿಸಿದ್ದರು. ಇಂದು ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಹಾರ ನಿಷೇಧದ ವಿರುದ್ಧ ಜಿಲ್ಲೆಯ ಜನ ಆಹಾರ ವೈವಿಧ್ಯಮಯ ಸಾಂಸ್ಕೃತಿಕತೆ ʻಆಹಾರ ಕ್ರಾಂತಿʼಗೆ ಆಹ್ವಾನ ನೀಡಿದ್ದಾರೆ.
ʻಆಹಾರ ಕ್ರಾಂತಿʼಗೆ ಆಹ್ವಾನ ಎಂಬ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ನಾಡಿನ ಪ್ರಜ್ಞಾವಂತರು, ಬುದ್ದಿಜೀವಿಗಳು ಮತ್ತು ಸಾಹಿತಿಗಳು ಬೆಂಬಲ ಸೂಚಿಸುತ್ತಿದ್ದಾರೆ.
ಬಾಡೂಟ ಬಳಗವು ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವೂ ಇರಬೇಕೆಂದು ಸಿಎಂ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದೆ.
ಸಮ್ಮೇಳನ ಹತ್ತಿರವಾಗುತ್ತಿದ್ದಂತೆ ಈ ಅಭಿಯಾನವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಸ್ಯಾಹಾರದ ಜೊತೆಗೆ ಮಾಂಸಾಹಾರವೂ ಇರಲಿ ಎಂಬ ಸ್ಲೋಗನ್ಗಳು ಸಾಮಾಜಿಕ ಜಾಲತಾಣಗಳನ್ನು ವ್ಯಾಪಿಸಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…