ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೈಕ್ ಜಾಥಾಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಬೈಕ್ ಜಾಥವು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು – ಮೈಸೂರು ಹೆದ್ದಾರಿ ಮಾರ್ಗವಾಗಿ ಕಲ್ಲಹಳ್ಳಿಯ ಎಪಿಎಂಸಿ ಮಾರುಕಟ್ಟೆ, ವಿವಿ ನಗರ, ಅನ್ನಪೂರ್ಣೇಶ್ವರಿ ನಗರ, ಕಾರಸವಾಡಿ ರಸ್ತೆಯ ಅರಳಿಮರ ಸರ್ಕಲ್ ಮುಖಾಂತರ ಕಾಲುವೆ ರಸ್ತೆಯಲ್ಲಿ ಸಾಗಿ ಹೊಸಹಳ್ಳಿಯ ಶ್ರೀ ವೆಂಕಟೇಶ್ವರ ದೇವಸ್ಥಾನ, ಬಿಸಿಲು ಮಾರಮ್ಮನ ದೇವಸ್ಥಾನ ಹೊಸಹಳ್ಳಿ ವೃತ್ತ, 100 ಅಡಿ ರಸ್ತೆಯಲ್ಲಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬಳಿಯಿಂದ ಸುಭಾಷ್ ನಗರದ ವಿನೋಬ ರಸ್ತೆ, ಸಂಜಯ ಸರ್ಕಲ್, ಆರ್ಪಿ ರಸ್ತೆಯ ಮೂಲಕ ಕರ್ನಾಟಕ ಬಾರ್ ಸರ್ಕಲ್, ಜಾಥಾ ನೂರಡಿ ರಸ್ತೆಯಲ್ಲಿ ಸಂಚರಿಸಿ ವಿವಿ ರಸ್ತೆಯ ಮೂಲಕ ಮಹಾವೀರ ವೃತ್ತ, ಸಿಮೆಂಟ್ ಡಬಲ್ ರೋಡ್, ಬೆಸಗರಹಳ್ಳಿ ರಾಮಣ್ಣ ವೃತ್ತ, ಆಸ್ಪತ್ರೆ ರಸ್ತೆ, ನಂದಾ ವೃತ್ತ, ಫ್ಯಾಕ್ಟರಿ ಸರ್ಕಲ್, ಗುತ್ತಲು ರಸ್ತೆ, ಸ್ವರ್ಣಸಂದ್ರ ಶನೇಶ್ವರ ದೇವಸ್ಥಾನದ ಮೂಲಕ ಮತ್ತೆ ಫ್ಯಾಕ್ಟರಿ ವೃತ್ತ, ದಾಟಿ ಕಾಳಮ್ಮನ ದೇವಸ್ಥಾನ ಕಾರೆಮನೆ ಗೇಟ್, ಹೊಳಲು ವೃತ್ತದ ಮೂಲಕ ಸಂಚರಿಸಿ ರೈತ ಸಭಾಂಗಣ ತಲುಪಿತು.
ಬೈಕ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದೆ. ಪ್ರಚಾರದ ಭಾಗವಾಗಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕನ್ನಡಿಗ ಮನಸ್ಸುಗಳು ಒಂದಾಗಿ ಸೇರಿ ಜೊತೆಗೂಡಿ ಸಾಹಿತ್ಯದ ಹಬ್ಬವನ್ನು ಆಚರಿಸಬೇಕು. ಮಂಡ್ಯ ಜನತೆಯು ಸಹಕಾರದಿಂದ ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ಕಸಾಪ ಸಮ್ಮೇಳನ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ಕನ್ನಡ ಪ್ರಜ್ಞೆ, ಕನ್ನಡ ಪ್ರೇಮ ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿ ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಬೇಕು. ಮಂಡ್ಯ ಜನತೆಗೆ ಜಾಗೃತಿ ಮೂಡಿಸಲು ಮೋಟಾರ್ ಬೈಕ್ ಜಾಥಾವನ್ನು ಆಯೋಜಿಸಲಾಗಿದೆ. ಎಲ್ಲರೂ ಸೇರಿ ಜಾಥಾವನ್ನು ಯಶಸ್ವಿಗೊಳಿಸಿ ಎಂದರು.
ಇದೇ ಸಂದರ್ಭದಲ್ಲಿ ಕಸಾಪ ನಗರ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೆಗೌಡ, ಕೋಶಾಧ್ಯಕ್ಷ ಅಪ್ಪಾಜಪ್ಪ, ತಾಲ್ಲೂಕು ಅಧ್ಯಕ್ಷ ಚಂದ್ರಲಿಂಗು, ಪದಾಧಿಕಾರಿಗಳಾದ ರತ್ನಾಶ್ರೀ, ವಿಜಯಲಕ್ಷ್ಮಿ, ಲತಾ, ಪ್ರೊ ಎಂ ಎ ಪ್ರಮೀಳಾ, ಪುಷ್ಪ ಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…